ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಮತ್ತು ಅನಿರುದ್ಧ ಬೋಸ್ ಅವರಿದ್ದ ಪೀಠವು, ಈ ಪ್ರಕರಣದ ವಿಚಾರಣೆ ನಡೆಸಿ ಸಿಬಿಐಗೆ ತನಿಖೆ ಪೂರ್ಣಗೊಳಿಸಲು ಕಾಲಾವಕಾಶ ನೀಡಿತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆಯ ವಕೀಲರಿಗೆ ₹5 ಲಕ್ಷ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ನಿರ್ದೇಶನ ನೀಡಿತು.