<p><strong>ನವದೆಹಲಿ:</strong> ಸಂವಿಧಾನದ 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ನವೆಂಬರ್ 14ರಿಂದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಮಾನಿಸಿದೆ.</p>.<p>ಅರ್ಜಿಗಳಿಗೆ ಸಂಬಂಧಿಸಿಪ್ರಮಾಣ ಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಜಮ್ಮು ಕಾಶ್ಮೀರ ಆಡಳಿತಕ್ಕೆ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಸೂಚಿಸಿದೆ.</p>.<p>ಪ್ರಮಾಣಪತ್ರ ಸಲ್ಲಿಸಲು ಎರಡು ವಾರಕ್ಕಿಂತ ಹೆಚ್ಚಿನ ಸಮಯ ನೀಡಬಾರದು ಎಂದು ಮಾಡಿದ್ದಮನವಿಯನ್ನು ಕೋರ್ಟ್ ತಿರಸ್ಕರಿಸಿತು. ಪ್ರಮಾಣಪತ್ರ ಸಲ್ಲಿಸಲು ನ್ಯಾಯೋಚಿತವಾದ ಸಮಯ ನೀಡುವುದಾಗಿ ತಿಳಿಸಿತು.</p>.<p>ನಾಲ್ಕು ವಾರಗಳೊಳಗೆ ಸರ್ಕಾರಗಳು ಪ್ರಮಾಣಪತ್ರ ಸಲ್ಲಿಸಲಿದ್ದು, ಅಲ್ಲಿಂದ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ<br />ಅವಕಾಶವಿದೆ.</p>.<p>ವಿಶೇಷಾಧಿಕಾರ ರದ್ದುಪಡಿಸಿದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೊಸ ಅರ್ಜಿಗಳನ್ನು ಸಲ್ಲಿಸುವುದಕ್ಕೆ ಕೋರ್ಟ್ ನಿರ್ಬಂಧ ವಿಧಿಸಿದೆ.</p>.<p>ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಆರ್. ಸುಭಾಷ್ ರೆಡ್ಡಿ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರು ಸಂವಿಧಾನ ಪೀಠದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂವಿಧಾನದ 370ನೇ ವಿಧಿಯಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷಾಧಿಕಾರವನ್ನು ತೆಗೆದು ಹಾಕಿದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲ ಅರ್ಜಿಗಳನ್ನು ನವೆಂಬರ್ 14ರಿಂದ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಮಾನಿಸಿದೆ.</p>.<p>ಅರ್ಜಿಗಳಿಗೆ ಸಂಬಂಧಿಸಿಪ್ರಮಾಣ ಪತ್ರ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ ಜಮ್ಮು ಕಾಶ್ಮೀರ ಆಡಳಿತಕ್ಕೆ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಸೂಚಿಸಿದೆ.</p>.<p>ಪ್ರಮಾಣಪತ್ರ ಸಲ್ಲಿಸಲು ಎರಡು ವಾರಕ್ಕಿಂತ ಹೆಚ್ಚಿನ ಸಮಯ ನೀಡಬಾರದು ಎಂದು ಮಾಡಿದ್ದಮನವಿಯನ್ನು ಕೋರ್ಟ್ ತಿರಸ್ಕರಿಸಿತು. ಪ್ರಮಾಣಪತ್ರ ಸಲ್ಲಿಸಲು ನ್ಯಾಯೋಚಿತವಾದ ಸಮಯ ನೀಡುವುದಾಗಿ ತಿಳಿಸಿತು.</p>.<p>ನಾಲ್ಕು ವಾರಗಳೊಳಗೆ ಸರ್ಕಾರಗಳು ಪ್ರಮಾಣಪತ್ರ ಸಲ್ಲಿಸಲಿದ್ದು, ಅಲ್ಲಿಂದ ಒಂದು ವಾರದೊಳಗೆ ಆಕ್ಷೇಪಣೆ ಸಲ್ಲಿಸಲು ಅರ್ಜಿದಾರರಿಗೆ<br />ಅವಕಾಶವಿದೆ.</p>.<p>ವಿಶೇಷಾಧಿಕಾರ ರದ್ದುಪಡಿಸಿದ ನಿರ್ಧಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೊಸ ಅರ್ಜಿಗಳನ್ನು ಸಲ್ಲಿಸುವುದಕ್ಕೆ ಕೋರ್ಟ್ ನಿರ್ಬಂಧ ವಿಧಿಸಿದೆ.</p>.<p>ನ್ಯಾಯಮೂರ್ತಿಗಳಾದ ಎಸ್.ಕೆ. ಕೌಲ್, ಆರ್. ಸುಭಾಷ್ ರೆಡ್ಡಿ, ಬಿ.ಆರ್.ಗವಾಯಿ ಮತ್ತು ಸೂರ್ಯಕಾಂತ್ ಅವರು ಸಂವಿಧಾನ ಪೀಠದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>