<p><strong>ನವದೆಹಲಿ:</strong> ಪಾಲ್ಘರ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆಉತ್ತರ ಕೇಳಿ ಮಹಾರಾಷ್ಟ್ರ ಸರ್ಕಾರಕ್ಕೆಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ನೀಡಿದೆ.</p>.<p>ನೋಟಿಸ್ ನೀಡುವ ಸಂದರ್ಭ ಜುಲೈ ಎರಡನೇ ವಾರದಲ್ಲಿ ವಿಚಾರಣೆಯಾಗಬೇಕಿರುವ ವಿಷಯಗಳನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು ಪಟ್ಟಿ ಮಾಡಿದೆ.</p>.<p>ಇಬ್ಬರು ಹಿಂದೂ ಸಾಧುಗಳು ಸೇರಿದಂತೆ ಮೂವರ ಹತ್ಯೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ. ಆ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ವಕೀಲ ಶಶಾಂಕ್ ಶೇಖರ್ ಜಾ ಅವರು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.</p>.<p>ಅಶೋಕ್ ಭೂಷಣ್, ಎಂ.ಆರ್.ಶಾ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠವು ವರ್ಚುವಲ್ ಕೋರ್ಟ್ ನಂಬರ್ ಐದರಲ್ಲಿ ವಿಡಿಯೊ ಕಾನ್ಫರೆನ್ಸ್ಮೂಲಕ ಪ್ರಕರಣದ ವಿಚಾರಣೆ ನಡೆಸಿತು.</p>.<p><a href="https://www.prajavani.net/stories/national/supreme-court-palghar-lynching-case-stating-that-state-investigation-cbi-probe-735505.html" target="_blank"><strong>ಇದನ್ನೂ ಓದಿ:ಪಾಲ್ಘರ್ ಗುಂಪು ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ</strong></a></p>.<p>ರಾಷ್ಟ್ರವ್ಯಾಪಿ ಹೇರಿದ್ದ ಲಾಕ್ಡೌನ್ ಹೊರತಾಗಿಯೂ, ಪ್ರಕರಣ ನಡೆದ ಸ್ಥಳದಲ್ಲಿ ನೆರೆದಿದ್ದ ಜನರ ಗುಂಪಿನ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದೂ ಆರೋಪಿಸಲಾಗಿದೆ.</p>.<p>ಏಪ್ರಿಲ್ನಲ್ಲಿ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಜನರ ಗುಂಪೊಂದು ದೊಣ್ಣೆಗಳಿಂದ ಹೊಡೆದುಹತ್ಯೆ ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ಸಿಐಡಿಗೆ ವಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಾಲ್ಘರ್ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆಉತ್ತರ ಕೇಳಿ ಮಹಾರಾಷ್ಟ್ರ ಸರ್ಕಾರಕ್ಕೆಸುಪ್ರೀಂ ಕೋರ್ಟ್ ಗುರುವಾರ ನೋಟಿಸ್ ನೀಡಿದೆ.</p>.<p>ನೋಟಿಸ್ ನೀಡುವ ಸಂದರ್ಭ ಜುಲೈ ಎರಡನೇ ವಾರದಲ್ಲಿ ವಿಚಾರಣೆಯಾಗಬೇಕಿರುವ ವಿಷಯಗಳನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಪೀಠವು ಪಟ್ಟಿ ಮಾಡಿದೆ.</p>.<p>ಇಬ್ಬರು ಹಿಂದೂ ಸಾಧುಗಳು ಸೇರಿದಂತೆ ಮೂವರ ಹತ್ಯೆ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಪೊಲೀಸರು ಸರಿಯಾಗಿ ನಡೆಸುತ್ತಿಲ್ಲ. ಆ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಸಿಬಿಐಗೆ ವರ್ಗಾಯಿಸಬೇಕೆಂದು ವಕೀಲ ಶಶಾಂಕ್ ಶೇಖರ್ ಜಾ ಅವರು ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.</p>.<p>ಅಶೋಕ್ ಭೂಷಣ್, ಎಂ.ಆರ್.ಶಾ ಮತ್ತು ವಿ.ರಾಮಸುಬ್ರಮಣಿಯನ್ ಅವರನ್ನು ಒಳಗೊಂಡ ಪೀಠವು ವರ್ಚುವಲ್ ಕೋರ್ಟ್ ನಂಬರ್ ಐದರಲ್ಲಿ ವಿಡಿಯೊ ಕಾನ್ಫರೆನ್ಸ್ಮೂಲಕ ಪ್ರಕರಣದ ವಿಚಾರಣೆ ನಡೆಸಿತು.</p>.<p><a href="https://www.prajavani.net/stories/national/supreme-court-palghar-lynching-case-stating-that-state-investigation-cbi-probe-735505.html" target="_blank"><strong>ಇದನ್ನೂ ಓದಿ:ಪಾಲ್ಘರ್ ಗುಂಪು ಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ</strong></a></p>.<p>ರಾಷ್ಟ್ರವ್ಯಾಪಿ ಹೇರಿದ್ದ ಲಾಕ್ಡೌನ್ ಹೊರತಾಗಿಯೂ, ಪ್ರಕರಣ ನಡೆದ ಸ್ಥಳದಲ್ಲಿ ನೆರೆದಿದ್ದ ಜನರ ಗುಂಪಿನ ಬಗ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಸ್ಥಳೀಯ ಆಡಳಿತ ಮತ್ತು ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದೂ ಆರೋಪಿಸಲಾಗಿದೆ.</p>.<p>ಏಪ್ರಿಲ್ನಲ್ಲಿ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ಇಬ್ಬರು ಸಾಧುಗಳು ಸೇರಿದಂತೆ ಮೂವರನ್ನು ಜನರ ಗುಂಪೊಂದು ದೊಣ್ಣೆಗಳಿಂದ ಹೊಡೆದುಹತ್ಯೆ ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಸರ್ಕಾರ ಸಿಐಡಿಗೆ ವಹಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>