<p class="title"><strong>ನವದೆಹಲಿ</strong>: ಮಕ್ಕಳ ಕಳ್ಳಸಾಗಣೆಯನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್ ನೀಡಿದೆ.</p>.<p class="title">ಬಚ್ಪನ್ ಬಚಾವೊ ಆಂದೋಲನ ಎಂಬ ಎನ್ಜಿಒ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.</p>.<p class="title">ಕೋವಿಡ್–19 ನಿಯಂತ್ರಿಸುವುದಕ್ಕಾಗಿ ಹೇರಿರುವ ಲಾಕ್ಡೌನ್ನ ಈ ಸಂದರ್ಭದಲ್ಲಿ ಮಕ್ಕಳ ಕಳ್ಳಸಾಗಣೆಯನ್ನೂ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p class="title">ದೇಶದ ವಿವಿಧ ಭಾಗಗಳಲ್ಲಿ ಮಕ್ಕಳ ಕಳ್ಳಸಾಗಣೆದಾರರು ಸಕ್ರಿಯರಾಗಿದ್ದಾರೆ. ಬಾಲ ಕಾರ್ಮಿಕರಾಗುವಂತೆ ಮಾಡಲು ಮತ್ತು ಲೈಂಗಿಕ ಶೋಷಣೆಗಾಗಿ ತಮ್ಮ ಮಕ್ಕಳನ್ನು ಮಾರಾಟ ಮಾಡುವಂತೆ ಬಡ ಕುಟುಂಬಗಳನ್ನು ಒತ್ತಾಯಿಸುವುದು ಹಾಗೂ ಪ್ರೇರೇಪಿಸುವ ಕೆಲಸ ನಡೆದಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಬೊಬ್ಡೆ ಹಾಗೂ ನ್ಯಾಯಮುರ್ತಿಗಳಾದ ಎಸ್.ಎ.ಬೋಪಣ್ಣ, ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠವು, ಅರ್ಜಿ ವಿಚಾರಣೆ ನಡೆಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.</p>.<p>ಮಕ್ಕಳ ಕಳ್ಳಸಾಗಣೆಯನ್ನು ತಡೆಗಟ್ಟಲುಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲುಅರ್ಜಿದಾರರ ಪರ ಹಿರಿಯ ವಕೀಲ ಎಚ್.ಎಸ್.ಫೂಲ್ಕಾ ಅವರೊಟ್ಟಿಗೆ ಕುಳಿತು ಸಲಹೆಗಳನ್ನು ಪಡೆಯಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.</p>.<p>ಎರಡು ವಾರಗಳ ನಂತರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ</strong>: ಮಕ್ಕಳ ಕಳ್ಳಸಾಗಣೆಯನ್ನು ತಡೆಯಲು ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೋಮವಾರ ನೋಟಿಸ್ ನೀಡಿದೆ.</p>.<p class="title">ಬಚ್ಪನ್ ಬಚಾವೊ ಆಂದೋಲನ ಎಂಬ ಎನ್ಜಿಒ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.</p>.<p class="title">ಕೋವಿಡ್–19 ನಿಯಂತ್ರಿಸುವುದಕ್ಕಾಗಿ ಹೇರಿರುವ ಲಾಕ್ಡೌನ್ನ ಈ ಸಂದರ್ಭದಲ್ಲಿ ಮಕ್ಕಳ ಕಳ್ಳಸಾಗಣೆಯನ್ನೂ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮಾರ್ಗಸೂಚಿಗಳನ್ನು ರೂಪಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.</p>.<p class="title">ದೇಶದ ವಿವಿಧ ಭಾಗಗಳಲ್ಲಿ ಮಕ್ಕಳ ಕಳ್ಳಸಾಗಣೆದಾರರು ಸಕ್ರಿಯರಾಗಿದ್ದಾರೆ. ಬಾಲ ಕಾರ್ಮಿಕರಾಗುವಂತೆ ಮಾಡಲು ಮತ್ತು ಲೈಂಗಿಕ ಶೋಷಣೆಗಾಗಿ ತಮ್ಮ ಮಕ್ಕಳನ್ನು ಮಾರಾಟ ಮಾಡುವಂತೆ ಬಡ ಕುಟುಂಬಗಳನ್ನು ಒತ್ತಾಯಿಸುವುದು ಹಾಗೂ ಪ್ರೇರೇಪಿಸುವ ಕೆಲಸ ನಡೆದಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.</p>.<p>ಮುಖ್ಯ ನ್ಯಾಯಮೂರ್ತಿ ಎಸ್.ಎ.ಬಬೊಬ್ಡೆ ಹಾಗೂ ನ್ಯಾಯಮುರ್ತಿಗಳಾದ ಎಸ್.ಎ.ಬೋಪಣ್ಣ, ಹೃಷಿಕೇಶ್ ರಾಯ್ ಅವರಿದ್ದ ನ್ಯಾಯಪೀಠವು, ಅರ್ಜಿ ವಿಚಾರಣೆ ನಡೆಸಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತು.</p>.<p>ಮಕ್ಕಳ ಕಳ್ಳಸಾಗಣೆಯನ್ನು ತಡೆಗಟ್ಟಲುಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲುಅರ್ಜಿದಾರರ ಪರ ಹಿರಿಯ ವಕೀಲ ಎಚ್.ಎಸ್.ಫೂಲ್ಕಾ ಅವರೊಟ್ಟಿಗೆ ಕುಳಿತು ಸಲಹೆಗಳನ್ನು ಪಡೆಯಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು.</p>.<p>ಎರಡು ವಾರಗಳ ನಂತರ ಈ ಅರ್ಜಿಯ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ತಿಳಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>