ಪರಿಶಿಷ್ಟರ ಮೇಲೆ ದೌರ್ಜನ್ಯ ಎಸಗಿದ ಆರೋಪಿಗೆ ನಿರೀಕ್ಷಣಾ ಜಾಮೀನಿಗೆ ಅವಕಾಶ ಇರದಂತೆ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿದಾರರ ಪರ ಹಿರಿಯ ವಕೀಲ ವಿಕಾಸ ಸಿಂಗ್ ಅವರು, ಇದಕ್ಕೆ ಕೂಡಲೇ ತಡೆಯಾಜ್ಞೆ ನೀಡಬೇಕು ಎಂದು ನ್ಯಾಯಪೀಠವನ್ನು ಕೋರಿದರು.