ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ, ಸಂಜೀವ್ ಖನ್ನಾ ಅವರನ್ನೂ ಒಳಗೊಂಡ ನ್ಯಾಯಪೀಠ, ‘ರಾಜ್ಯದಲ್ಲಿ ವಿದೇಶಿ ಪ್ರಜೆಗಳ ನ್ಯಾಯಮಂಡಳಿಗಳ ಕೊರತೆ ಇದೆಯೆ ಹಾಗೂ ಇವು ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂದು ಅಫಿಡವಿಟ್ ಸಲ್ಲಿಸಬೇಕು. ಜತೆಗೆ ಬಂಧನ ಕೇಂದ್ರಗಳು ಯಾವ ಸ್ಥಿತಿಯಲ್ಲಿವೆ ಎಂದು ತಿಳಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿತು.