<p><strong>ನವದೆಹಲಿ: </strong>‘ಒರು ಅಡಾರ್ ಲವ್’ ಚಿತ್ರದಲ್ಲಿ ಕಣ್ಣು ಮಿಟುಕಿಸುವ ಮೂಲಕ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್, ಸಿನಿಮಾ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್ಐಆರ್)ಯನ್ನು ಶುಕ್ರವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.</p>.<p>‘ವಾರಿಯರ್ ಅಭಿನಯಿಸಿರುವ ಈ ಜಾನಪದ ಹಾಡು 1978ರಿಂದ ಬಳಸುತ್ತಿದ್ದಾರೆ. ಈ ಕಾರಣದಿಂದ ಈ ಹಾಡನ್ನು ಧರ್ಮನಿಂದನೆ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ’ ಎಂದುಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ,ನ್ಯಾಯಮೂರ್ತಿ ಎ.ಎಂ ಖಾನ್ವಿಲ್ಕರ್ ನೇತೃತ್ವದ ವಿಭಾಗೀಯ ಪೀಠವು ತೀರ್ಪಿನಲ್ಲಿ ತಿಳಿಸಿದೆ.</p>.<p>‘ವಾರಿಯರ್ ಮತ್ತು ಇತರರ ವಿರುದ್ಧ ತೆಲಂಗಾಣದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ವಜಾಗೊಳಿಸಲಾಗಿದೆ. ಜೊತೆಗೆ, ಈ ಚಿತ್ರಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಚಿತ್ರದ ನಿರ್ದೇಶಕರ ವಿರುದ್ಧ ಸಿಆರ್ಪಿಸಿ ಕಲಂ 200ರ ಅಡಿಯಲ್ಲಿ ಯಾವುದೇ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲು ಮಾಡಬಾರದು’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.</p>.<p>ಕ್ರಿಕೆಟಿಗ ಎಂ.ಎಸ್.ಧೋನಿ ವಿರುದ್ಧ ಇಂತಹುದ್ದೇ ಪ್ರಕರಣ ದಾಖಲಾಗಿದ್ದ ವೇಳೆ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠ, ಭಾರತೀಯ ದಂಡಸಂಹಿತೆ 295ಎ ಕಲಂ ಅಡಿಯಲ್ಲಿ ನಟಿ ಮತ್ತು ಇತರರು ಯಾವುದೇ ಅಪರಾಧ ಎಸಗಿಲ್ಲ ಎಂದು ತಿಳಿಸಿತು.</p>.<p>ಐಪಿಸಿ 295ಎ ಕಲಂ ಪ್ರಕಾರ, ಯಾವುದೇ ಧರ್ಮದ ಅವಹೇಳನ ಹಾಗೂ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ.</p>.<p><strong>ಏನೀದು ಪ್ರಕರಣ ?</strong><br />‘ಒರು ಅಡಾರ್ ಲವ್’ ಚಿತ್ರದ ಮಾಣಿಕ್ಯ ಮಲರಾಯ ಪೂವಿ' ಗೀತೆ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಕೆಲವು ಮುಸ್ಲಿಮರು ನೀಡಿದ ದೂರಿನ ಅನ್ವಯ ಫೆಬ್ರುವರಿ 14ರಂದು ಪ್ರಿಯಾ ವಿರುದ್ಧ ಹೈದರಾಬಾದಿನ ಫಲಕ್ನಾಮಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<p>ಇದರ ಬೆನ್ನಲ್ಲೇ, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ನಟಿ, ತನ್ನ ಮೇಲೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಹಾಗೂ ವಿವಿಧ ರಾಜ್ಯಗಳಲ್ಲಿ ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೂ ತಡೆಯೊಡ್ಡಬೇಕು ಎಂದು ಮನವಿ ಮಾಡಿದ್ದರು.</p>.<p>‘ಮಲಯಾಳಂಯೇತರ ರಾಜ್ಯಗಳಲ್ಲಿ ದೂರು ದಾಖಲಿಸಿರುವವರು ಹಾಡನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಪ್ರವಾದಿ ಮಹಮದ್ ಹಾಗೂ ಅವರ ಮೊದಲ ಪತ್ನಿ ಖದೀಜಾ ಅವರ ನಡುವಿನ ಪ್ರೀತಿಯನ್ನು ಹಾಡು ಶ್ಲಾಘಿಸುತ್ತದೆ’ ಎಂದು ಅರ್ಜಿಯಲ್ಲಿ ತಿಳಿಸಿದ್ದರು.</p>.<p>ಇದು ಜಾನಪದ ಹಾಡು. ಜಬ್ಬಾರ್ ಎಂಬುವರು 1978ರಲ್ಲಿ ರಚಿಸಿದ್ದಾರೆ. ಕಳೆದ 40 ವರ್ಷಗಳಿಂದ ಮುಸ್ಲಿಮರು ಇದನ್ನು ಬಳಸುತ್ತಿದ್ದು, ಈಗೇಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಿಯಾ ಅವರು ಅರ್ಜಿಯಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ಒರು ಅಡಾರ್ ಲವ್’ ಚಿತ್ರದಲ್ಲಿ ಕಣ್ಣು ಮಿಟುಕಿಸುವ ಮೂಲಕ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿದ ಮಲಯಾಳಂ ನಟಿ ಪ್ರಿಯಾ ಪ್ರಕಾಶ್ ವಾರಿಯರ್, ಸಿನಿಮಾ ನಿರ್ದೇಶಕ ಹಾಗೂ ನಿರ್ಮಾಪಕರ ವಿರುದ್ಧ ದಾಖಲಾಗಿರುವ ಪ್ರಥಮ ಮಾಹಿತಿ ವರದಿ (ಎಫ್ಐಆರ್)ಯನ್ನು ಶುಕ್ರವಾರ ಸುಪ್ರೀಂಕೋರ್ಟ್ ವಜಾಗೊಳಿಸಿದೆ.</p>.<p>‘ವಾರಿಯರ್ ಅಭಿನಯಿಸಿರುವ ಈ ಜಾನಪದ ಹಾಡು 1978ರಿಂದ ಬಳಸುತ್ತಿದ್ದಾರೆ. ಈ ಕಾರಣದಿಂದ ಈ ಹಾಡನ್ನು ಧರ್ಮನಿಂದನೆ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ’ ಎಂದುಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ,ನ್ಯಾಯಮೂರ್ತಿ ಎ.ಎಂ ಖಾನ್ವಿಲ್ಕರ್ ನೇತೃತ್ವದ ವಿಭಾಗೀಯ ಪೀಠವು ತೀರ್ಪಿನಲ್ಲಿ ತಿಳಿಸಿದೆ.</p>.<p>‘ವಾರಿಯರ್ ಮತ್ತು ಇತರರ ವಿರುದ್ಧ ತೆಲಂಗಾಣದಲ್ಲಿ ದಾಖಲಾಗಿರುವ ಎಫ್ಐಆರ್ ಅನ್ನು ವಜಾಗೊಳಿಸಲಾಗಿದೆ. ಜೊತೆಗೆ, ಈ ಚಿತ್ರಕ್ಕೆ ಸಂಬಂಧಿಸಿದಂತೆ ನಟಿ ಹಾಗೂ ಚಿತ್ರದ ನಿರ್ದೇಶಕರ ವಿರುದ್ಧ ಸಿಆರ್ಪಿಸಿ ಕಲಂ 200ರ ಅಡಿಯಲ್ಲಿ ಯಾವುದೇ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲು ಮಾಡಬಾರದು’ ಎಂದು ನ್ಯಾಯಪೀಠ ಸ್ಪಷ್ಟಪಡಿಸಿತು.</p>.<p>ಕ್ರಿಕೆಟಿಗ ಎಂ.ಎಸ್.ಧೋನಿ ವಿರುದ್ಧ ಇಂತಹುದ್ದೇ ಪ್ರಕರಣ ದಾಖಲಾಗಿದ್ದ ವೇಳೆ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪನ್ನು ಉಲ್ಲೇಖಿಸಿದ ನ್ಯಾಯಪೀಠ, ಭಾರತೀಯ ದಂಡಸಂಹಿತೆ 295ಎ ಕಲಂ ಅಡಿಯಲ್ಲಿ ನಟಿ ಮತ್ತು ಇತರರು ಯಾವುದೇ ಅಪರಾಧ ಎಸಗಿಲ್ಲ ಎಂದು ತಿಳಿಸಿತು.</p>.<p>ಐಪಿಸಿ 295ಎ ಕಲಂ ಪ್ರಕಾರ, ಯಾವುದೇ ಧರ್ಮದ ಅವಹೇಳನ ಹಾಗೂ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವವರ ವಿರುದ್ಧ ಕ್ರಮ ತೆಗೆದುಕೊಳ್ಳಬಹುದಾಗಿದೆ.</p>.<p><strong>ಏನೀದು ಪ್ರಕರಣ ?</strong><br />‘ಒರು ಅಡಾರ್ ಲವ್’ ಚಿತ್ರದ ಮಾಣಿಕ್ಯ ಮಲರಾಯ ಪೂವಿ' ಗೀತೆ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡುತ್ತಿದೆ ಎಂದು ಕೆಲವು ಮುಸ್ಲಿಮರು ನೀಡಿದ ದೂರಿನ ಅನ್ವಯ ಫೆಬ್ರುವರಿ 14ರಂದು ಪ್ರಿಯಾ ವಿರುದ್ಧ ಹೈದರಾಬಾದಿನ ಫಲಕ್ನಾಮಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.</p>.<p>ಇದರ ಬೆನ್ನಲ್ಲೇ, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ನಟಿ, ತನ್ನ ಮೇಲೆ ದಾಖಲಾಗಿರುವ ಎಫ್ಐಆರ್ ರದ್ದುಗೊಳಿಸಬೇಕು ಹಾಗೂ ವಿವಿಧ ರಾಜ್ಯಗಳಲ್ಲಿ ನಡೆಸುತ್ತಿರುವ ಕ್ರಿಮಿನಲ್ ವಿಚಾರಣೆಗೂ ತಡೆಯೊಡ್ಡಬೇಕು ಎಂದು ಮನವಿ ಮಾಡಿದ್ದರು.</p>.<p>‘ಮಲಯಾಳಂಯೇತರ ರಾಜ್ಯಗಳಲ್ಲಿ ದೂರು ದಾಖಲಿಸಿರುವವರು ಹಾಡನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಪ್ರವಾದಿ ಮಹಮದ್ ಹಾಗೂ ಅವರ ಮೊದಲ ಪತ್ನಿ ಖದೀಜಾ ಅವರ ನಡುವಿನ ಪ್ರೀತಿಯನ್ನು ಹಾಡು ಶ್ಲಾಘಿಸುತ್ತದೆ’ ಎಂದು ಅರ್ಜಿಯಲ್ಲಿ ತಿಳಿಸಿದ್ದರು.</p>.<p>ಇದು ಜಾನಪದ ಹಾಡು. ಜಬ್ಬಾರ್ ಎಂಬುವರು 1978ರಲ್ಲಿ ರಚಿಸಿದ್ದಾರೆ. ಕಳೆದ 40 ವರ್ಷಗಳಿಂದ ಮುಸ್ಲಿಮರು ಇದನ್ನು ಬಳಸುತ್ತಿದ್ದು, ಈಗೇಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಿಯಾ ಅವರು ಅರ್ಜಿಯಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>