ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ಅಶೋಕ್ ಭೂಷಣ್, ಅರ್ಜಿದಾರರ ಪರ ಹಾಜರಿದ್ದ ವಕೀಲರಿಗೆ ಸೆಕ್ಷನ್ 188 ಜಾರಿಗೊಳಿಸದೇ ಲಾಕ್ಡೌನ್ ಅನುಷ್ಠಾನ ಹೇಗೆ ಮಾಡುವುದು ಎಂದು ಪ್ರಶ್ನಿಸಿದರು. ಉತ್ತರ ಪ್ರದೇಶದ ಮಾಜಿ ಡಿಜಿಪಿ ವಿಕ್ರಮ್ ಸಿಂಗ್ ಅಧ್ಯಕ್ಷರಾಗಿರುವ ಸೆಂಟರ್ ಫಾರ್ ಅಕೌಂಟಬಿಲಿಟಿ ಅಂಡ್ ಸಿಸ್ಟಮ್ಯಾಟಿಕ್ ಚೇಂಜ್ ಸಂಸ್ಥೆಯು ಅರ್ಜಿ ಸಲ್ಲಿಸಿದ್ದು, ಇದರ ಪರ ವಕೀಲ ಗೋಪಾಲ್ ಶಂಕರನಾರಾಯಣ್, ವಕೀಲ ವಿರಾಗ್ ಗುಪ್ತಾ ಹಾಜರಿದ್ದರು.