ಮೊಹಮ್ಮದ್ ನಿಜಾಮುದ್ದೀನ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಸಂಜೀವ್ ಖನ್ನಾ ಅವರನ್ನೊಳಗೊಂಡ ಪೀಠವು, ‘ಚುನಾವಣಾ ಆಯೋಗವು ಈಗಾಗಲೇ ಈ ಅರ್ಜಿಯನ್ನು ಪರಿಶೀಲಿಸಿ, ಸಮಯ ಬದಲಾವಣೆಯಿಂದ ಅನೇಕ ಸಮಸ್ಯೆಗಳು ಉಂಟಾಗುತ್ತವೆ ಎಂದಿದೆ. ಈ ವಿಚಾರದಲ್ಲಿ ಮಧ್ಯಪ್ರವೇಶಿಸಲು ಕೋರ್ಟ್ ಇಚ್ಛಿಸುವುದಿಲ್ಲ’ ಎಂದಿದೆ.