ಬಿಎಸ್ಪಿ ಸದಸ್ಯ ಸತೀಶ್ಚಂದ್ರ ಮಿಶ್ರಾ ಶೂನ್ಯವೇಳೆಯಲ್ಲಿ ಮಾಡಿದ ಪ್ರಸ್ತಾವಕ್ಕೆ ಉತ್ತರಿಸಿದ ಸಚಿವರು, ಉತ್ತರ ಪ್ರದೇಶ ಸರ್ಕಾರವು ಮೀಸಲು ಪಟ್ಟಿಯಲ್ಲಿ ಬದಲಾವಣೆ ಮಾಡಲು ಉದ್ದೇಶಿಸಿದರೆ, ಆ ಕುರಿತ ಪ್ರಸ್ತಾವವನ್ನು ಕೇಂದ್ರಕ್ಕೆ ಕಳುಹಿಸಬೇಕು. ಆಗ ಕೇಂದ್ರವು ಅದನ್ನು ಪರಿಗಣಿಸಬಹುದು. ಜಾತಿಯನ್ನು ಒಂದು ಪಟ್ಟಿಯಿಂದ ಇನ್ನೊಂದು ಪಟ್ಟಿಗೆ ವರ್ಗಾಯಿಸುವ ಅಧಿಕಾರ ಸಂಸತ್ತಿಗೆ ಮಾತ್ರ ಇದೆ ಎಂದರು.