<p><strong>ನವದೆಹಲಿ</strong>: ರಾಜ್ಯಸಭೆಯಲ್ಲಿ ತೆರವಾಗಿರುವ ಎರಡು ಸ್ಥಾನಗಳಿಗೆ ಪ್ರತ್ಯೇಕವಾಗಿ ಉಪಚುನಾವಣೆ ನಡೆಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ನ ಗುಜರಾತ್ ಘಟಕ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.</p>.<p>ಜೂನ್ 24ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸೂರ್ಯಕಾಂತ ಅವರನ್ನು ಒಳಗೊಂಡ ರಜಾಕಾಲದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿತು.</p>.<p>‘ಕೇವಲ ಚುನಾವಣಾ ತಕರಾರು ಅರ್ಜಿಯನ್ನಷ್ಟೇ ಪರಿಗಣಿಸಿ ತೀರ್ಪು ನೀಡುವಂತಹ ಪ್ರಕರಣ ಇದಲ್ಲ. ಹೀಗಾಗಿ ಅರ್ಜಿಯ ವಿಚಾರಣೆ ನಡೆಸಬೇಕಾಗುತ್ತದೆ’ ಎಂದು ಪೀಠ ಹೇಳಿದೆ.</p>.<p>ಬಿಜೆಪಿಯ ಅಮಿತ್ ಶಾ, ಸ್ಮೃತಿ ಇರಾನಿ ಲೋಕಸಭೆಗೆ ಆಯ್ಕೆಗೊಂಡ ಕಾರಣ ರಾಜ್ಯಸಭೆಯಎರಡು ಸ್ಥಾನಗಳು ತೆರವಾಗಿವೆ. ಈ ಸ್ಥಾನಗಳಿಗಾಗಿ ಪ್ರತ್ಯೇಕವಾಗಿ ಉಪಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ ಆಯೋಗದ ಕ್ರಮ ಪ್ರಶ್ನಿಸಿ ಗುಜರಾತ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಪರೇಶ್ಭಾಯಿ ಧನಾನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ರಾಜ್ಯಸಭೆಯಲ್ಲಿ ತೆರವಾಗಿರುವ ಎರಡು ಸ್ಥಾನಗಳಿಗೆ ಪ್ರತ್ಯೇಕವಾಗಿ ಉಪಚುನಾವಣೆ ನಡೆಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ನ ಗುಜರಾತ್ ಘಟಕ ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚಿಸಿದೆ.</p>.<p>ಜೂನ್ 24ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದ ನ್ಯಾಯಮೂರ್ತಿಗಳಾದ ದೀಪಕ್ ಗುಪ್ತಾ ಹಾಗೂ ಸೂರ್ಯಕಾಂತ ಅವರನ್ನು ಒಳಗೊಂಡ ರಜಾಕಾಲದ ನ್ಯಾಯಪೀಠ, ಅರ್ಜಿ ವಿಚಾರಣೆಯನ್ನು ಜೂನ್ 25ಕ್ಕೆ ಮುಂದೂಡಿತು.</p>.<p>‘ಕೇವಲ ಚುನಾವಣಾ ತಕರಾರು ಅರ್ಜಿಯನ್ನಷ್ಟೇ ಪರಿಗಣಿಸಿ ತೀರ್ಪು ನೀಡುವಂತಹ ಪ್ರಕರಣ ಇದಲ್ಲ. ಹೀಗಾಗಿ ಅರ್ಜಿಯ ವಿಚಾರಣೆ ನಡೆಸಬೇಕಾಗುತ್ತದೆ’ ಎಂದು ಪೀಠ ಹೇಳಿದೆ.</p>.<p>ಬಿಜೆಪಿಯ ಅಮಿತ್ ಶಾ, ಸ್ಮೃತಿ ಇರಾನಿ ಲೋಕಸಭೆಗೆ ಆಯ್ಕೆಗೊಂಡ ಕಾರಣ ರಾಜ್ಯಸಭೆಯಎರಡು ಸ್ಥಾನಗಳು ತೆರವಾಗಿವೆ. ಈ ಸ್ಥಾನಗಳಿಗಾಗಿ ಪ್ರತ್ಯೇಕವಾಗಿ ಉಪಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ ಆಯೋಗದ ಕ್ರಮ ಪ್ರಶ್ನಿಸಿ ಗುಜರಾತ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಪರೇಶ್ಭಾಯಿ ಧನಾನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>