ಬಿಜೆಪಿಯ ಅಮಿತ್ ಶಾ, ಸ್ಮೃತಿ ಇರಾನಿ ಲೋಕಸಭೆಗೆ ಆಯ್ಕೆಗೊಂಡ ಕಾರಣ ರಾಜ್ಯಸಭೆಯಎರಡು ಸ್ಥಾನಗಳು ತೆರವಾಗಿವೆ. ಈ ಸ್ಥಾನಗಳಿಗಾಗಿ ಪ್ರತ್ಯೇಕವಾಗಿ ಉಪಚುನಾವಣೆ ನಡೆಸಲು ಅಧಿಸೂಚನೆ ಹೊರಡಿಸಿದ ಆಯೋಗದ ಕ್ರಮ ಪ್ರಶ್ನಿಸಿ ಗುಜರಾತ್ ವಿಧಾನಸಭೆ ವಿರೋಧ ಪಕ್ಷದ ನಾಯಕ ಪರೇಶ್ಭಾಯಿ ಧನಾನಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.