ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ದೀಪಕ್ ಗುಪ್ತ ಮತ್ತು ಅನಿರುದ್ಧ ಬೋಸ್ ಅವರ ದ್ವಿಸದಸ್ಯ ಪೀಠ ಆರೋಪಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದ್ದು, ಮನುಷ್ಯನ ಅಗತ್ಯ ವಸ್ತುಗಳಲ್ಲಿ ಕಲಬೆರಕೆ ಸಲ್ಲದು ಎಂದು ಹೇಳಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ಶನಿವಾರ ವರದಿ ಮಾಡಿದೆ.