<p><strong>ನವದೆಹಲಿ: </strong>ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಪರಿಶೀಲನೆ ಪ್ರಕ್ರಿಯೆಯನ್ನು ಲೋಕಸಭಾ ಚುನಾವಣೆಯ ಕಾರಣ ಕೆಲ ವಾರಗಳ ಮಟ್ಟಿಗೆ ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಪ್ರಕ್ರಿಯೆ ಮುಂದೂಡಲು ನಿರ್ದೇಶನ ನೀಡಿ ಎಂದುಕೋರಿದ್ದ ಕೇಂದ್ರ ಸರ್ಕಾರವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ತರಾಟೆಗೆ ತೆಗೆದುಕೊಂಡಿದೆ.</p>.<p>ಎನ್ಆರ್ಸಿ ಅಂತಿಮಗೊಳಿಸಲು ಮುಂದಾಗಿರುವ ಕೋರ್ಟ್ನ ಎಲ್ಲ ಯತ್ನಗಳನ್ನೂ ಕೇಂದ್ರ ಗೃಹಸಚಿವಾಲಯ ಹಳಿತಪ್ಪಿಸಲು ಯತ್ನಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಟೀಕಿಸಿದೆ.</p>.<p>ಅಸ್ಸಾಂನಲ್ಲಿ ಎನ್ಆರ್ಸಿ ಕೆಲಸಕ್ಕೆ ನಿಯುಕ್ತಿ ಮಾಡಿರುವ 167 ತುಕಡಿಗಳನ್ನು ವಾಪಸ್ ಕರೆಸಿಕೊಂಡು ಚುನಾವಣೆಗೆ ಬಳಸಿಕೊಳ್ಳಲು ಕೇಂದ್ರ ಇಚ್ಛಿಸಿತ್ತು. ಈ ಕುರಿತು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಸಲ್ಲಿಸಿದ್ದ ಅರ್ಜಿ ಕುರಿತು ಯಾವುದೇ ಆದೇಶ ಹೊರಡಿಸಲು ಕೋರ್ಟ್ ಒಪ್ಪಲಿಲ್ಲ.</p>.<p>‘ಚುನಾವಣೆ ಶಾಂತಿಯುತವಾಗಿ ನಡೆಯಬೇಕು, ಅಂತೆಯೇ ಎನ್ಆರ್ಸಿ ಕೆಲಸವೂ ಪೂರ್ಣಗೊಳ್ಳಬೇಕು’ ಎಂದು ಕೋರ್ಟ್ ಖಾರವಾಗಿ ಪ್ರತಿಕ್ರಿಯಿಸಿತು. ಎನ್ಆರ್ಸಿ ಅಂತಿಮ ಪಟ್ಟಿ ತಯಾರಿಸಲು ಜುಲೈ 31, 2019 ಗಡುವು ಇದೆ.</p>.<p><strong>ಬಿಜೆಪಿ ಘಟಕ ಬರ್ಖಾಸ್ತು ಬೆದರಿಕೆ</strong></p>.<p>‘ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ‘ಪೌರತ್ವ (ತಿದ್ದುಪಡಿ) ಮಸೂದೆ’ಯನ್ನು ಜಾರಿಗೆ ತಂದರೆ ಮಿಜೋರಾಂನ ಬಿಜೆಪಿ ಘಟಕವನ್ನು ವಿಸರ್ಜನೆ ಮಾಡುತ್ತೇವೆ’ ಎಂದು ಮಿಜೋರಾಂ ಬಿಜೆಪಿ ಅಧ್ಯಕ್ಷ ಜಾನ್ ವಿ. ಹ್ಲೂನಾ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಪರಿಶೀಲನೆ ಪ್ರಕ್ರಿಯೆಯನ್ನು ಲೋಕಸಭಾ ಚುನಾವಣೆಯ ಕಾರಣ ಕೆಲ ವಾರಗಳ ಮಟ್ಟಿಗೆ ಮುಂದೂಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಪ್ರಕ್ರಿಯೆ ಮುಂದೂಡಲು ನಿರ್ದೇಶನ ನೀಡಿ ಎಂದುಕೋರಿದ್ದ ಕೇಂದ್ರ ಸರ್ಕಾರವನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠ ತರಾಟೆಗೆ ತೆಗೆದುಕೊಂಡಿದೆ.</p>.<p>ಎನ್ಆರ್ಸಿ ಅಂತಿಮಗೊಳಿಸಲು ಮುಂದಾಗಿರುವ ಕೋರ್ಟ್ನ ಎಲ್ಲ ಯತ್ನಗಳನ್ನೂ ಕೇಂದ್ರ ಗೃಹಸಚಿವಾಲಯ ಹಳಿತಪ್ಪಿಸಲು ಯತ್ನಿಸುತ್ತಿದೆ ಎಂದು ಸುಪ್ರೀಂಕೋರ್ಟ್ ಟೀಕಿಸಿದೆ.</p>.<p>ಅಸ್ಸಾಂನಲ್ಲಿ ಎನ್ಆರ್ಸಿ ಕೆಲಸಕ್ಕೆ ನಿಯುಕ್ತಿ ಮಾಡಿರುವ 167 ತುಕಡಿಗಳನ್ನು ವಾಪಸ್ ಕರೆಸಿಕೊಂಡು ಚುನಾವಣೆಗೆ ಬಳಸಿಕೊಳ್ಳಲು ಕೇಂದ್ರ ಇಚ್ಛಿಸಿತ್ತು. ಈ ಕುರಿತು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಸಲ್ಲಿಸಿದ್ದ ಅರ್ಜಿ ಕುರಿತು ಯಾವುದೇ ಆದೇಶ ಹೊರಡಿಸಲು ಕೋರ್ಟ್ ಒಪ್ಪಲಿಲ್ಲ.</p>.<p>‘ಚುನಾವಣೆ ಶಾಂತಿಯುತವಾಗಿ ನಡೆಯಬೇಕು, ಅಂತೆಯೇ ಎನ್ಆರ್ಸಿ ಕೆಲಸವೂ ಪೂರ್ಣಗೊಳ್ಳಬೇಕು’ ಎಂದು ಕೋರ್ಟ್ ಖಾರವಾಗಿ ಪ್ರತಿಕ್ರಿಯಿಸಿತು. ಎನ್ಆರ್ಸಿ ಅಂತಿಮ ಪಟ್ಟಿ ತಯಾರಿಸಲು ಜುಲೈ 31, 2019 ಗಡುವು ಇದೆ.</p>.<p><strong>ಬಿಜೆಪಿ ಘಟಕ ಬರ್ಖಾಸ್ತು ಬೆದರಿಕೆ</strong></p>.<p>‘ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಗಾನಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ‘ಪೌರತ್ವ (ತಿದ್ದುಪಡಿ) ಮಸೂದೆ’ಯನ್ನು ಜಾರಿಗೆ ತಂದರೆ ಮಿಜೋರಾಂನ ಬಿಜೆಪಿ ಘಟಕವನ್ನು ವಿಸರ್ಜನೆ ಮಾಡುತ್ತೇವೆ’ ಎಂದು ಮಿಜೋರಾಂ ಬಿಜೆಪಿ ಅಧ್ಯಕ್ಷ ಜಾನ್ ವಿ. ಹ್ಲೂನಾ ಎಚ್ಚರಿಕೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>