<p><strong>ನವದೆಹಲಿ:</strong> ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ತಮಿಳುನಾಡಿನ ಎಐಎಡಿಎಂಕೆಯ ಇಬ್ಬರುಶಾಸಕರಿಗೆ ಸ್ಪೀಕರ್ ನೀಡಿದ್ದ ನೋಟಿಸ್ಗೆಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.</p>.<p>ಶಾಸಕರ ವಿರುದ್ಧ ಅನರ್ಹತೆ ಪ್ರಕ್ರಿಯೆ ಚಾಲನೆಗೊಳಿಸಲು ಈ ನೋಟಿಸ್ ನೀಡಲಾಗಿತ್ತು. ಶಾಸಕರಾದ ವಿ.ಟಿ. ಕಲೈಸೆಲ್ವನ್ ಮತ್ತು ಇ. ರತ್ನಸಭಾಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದೆ.</p>.<p>ಶಾಸಕರಾದ ವಿ.ಟಿ. ಕಲೈಸೆಲ್ವನ್, ಇ.ರತ್ನಸಭಾಪತಿ ಮತ್ತು ಎ.ಪ್ರಭು ಅವರಿಗೆ ಏಪ್ರಿಲ್ 30ರಂದು ಸ್ಪೀಕರ್ ಪಿ.ಧನಪಾಲ್ ಅವರು ಪಕ್ಷಾಂತರ ವಿರೋಧಿ ಕಾನೂನಿನ ಅನ್ವಯ ನೋಟಿಸ್ ನೀಡಿದ್ದರು.</p>.<p>ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಮುಖಂಡ ಟಿ.ಟಿ.ವಿ. ದಿನಕರನ್ ಅವರೊಂದಿಗೆ ಗುರುತಿಸಿ<br />ಕೊಂಡಿರುವುದಕ್ಕೆ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ಮೂವರಲ್ಲಿ ಇಬ್ಬರು ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p class="Subhead">ಪ್ರಜಾಪ್ರಭುತ್ವಕ್ಕೆ ಸಂದ ಜಯ: ’ಅನರ್ಹತೆ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ಸಂದ ಜಯ. ನಾವು ಪಕ್ಷಕ್ಕೆ ನಿಷ್ಠರಾಗಿದ್ದೇವೆ‘ ಎಂದು ಎಐಎಡಿಎಂಕೆಯ ಇಬ್ಬರು ಶಾಸಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಲ್ಲಿ ತಮಿಳುನಾಡಿನ ಎಐಎಡಿಎಂಕೆಯ ಇಬ್ಬರುಶಾಸಕರಿಗೆ ಸ್ಪೀಕರ್ ನೀಡಿದ್ದ ನೋಟಿಸ್ಗೆಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ.</p>.<p>ಶಾಸಕರ ವಿರುದ್ಧ ಅನರ್ಹತೆ ಪ್ರಕ್ರಿಯೆ ಚಾಲನೆಗೊಳಿಸಲು ಈ ನೋಟಿಸ್ ನೀಡಲಾಗಿತ್ತು. ಶಾಸಕರಾದ ವಿ.ಟಿ. ಕಲೈಸೆಲ್ವನ್ ಮತ್ತು ಇ. ರತ್ನಸಭಾಪತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ಈ ಆದೇಶ ನೀಡಿದೆ.</p>.<p>ಶಾಸಕರಾದ ವಿ.ಟಿ. ಕಲೈಸೆಲ್ವನ್, ಇ.ರತ್ನಸಭಾಪತಿ ಮತ್ತು ಎ.ಪ್ರಭು ಅವರಿಗೆ ಏಪ್ರಿಲ್ 30ರಂದು ಸ್ಪೀಕರ್ ಪಿ.ಧನಪಾಲ್ ಅವರು ಪಕ್ಷಾಂತರ ವಿರೋಧಿ ಕಾನೂನಿನ ಅನ್ವಯ ನೋಟಿಸ್ ನೀಡಿದ್ದರು.</p>.<p>ಅಮ್ಮ ಮಕ್ಕಳ್ ಮುನ್ನೇತ್ರ ಕಳಗಂ (ಎಎಂಎಂಕೆ) ಮುಖಂಡ ಟಿ.ಟಿ.ವಿ. ದಿನಕರನ್ ಅವರೊಂದಿಗೆ ಗುರುತಿಸಿ<br />ಕೊಂಡಿರುವುದಕ್ಕೆ ವಿವರಣೆ ನೀಡುವಂತೆ ನೋಟಿಸ್ನಲ್ಲಿ ಸೂಚಿಸಲಾಗಿತ್ತು. ಇದನ್ನು ಪ್ರಶ್ನಿಸಿ ಮೂವರಲ್ಲಿ ಇಬ್ಬರು ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.</p>.<p class="Subhead">ಪ್ರಜಾಪ್ರಭುತ್ವಕ್ಕೆ ಸಂದ ಜಯ: ’ಅನರ್ಹತೆ ಕ್ರಮಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದು ಪ್ರಜಾಪ್ರಭುತ್ವ ಮತ್ತು ನ್ಯಾಯಕ್ಕೆ ಸಂದ ಜಯ. ನಾವು ಪಕ್ಷಕ್ಕೆ ನಿಷ್ಠರಾಗಿದ್ದೇವೆ‘ ಎಂದು ಎಐಎಡಿಎಂಕೆಯ ಇಬ್ಬರು ಶಾಸಕರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>