ನಂತರ ಮಾತಿಗಿಳಿದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್ ಜಾಧವ್, ‘ಬದುಕಿರುವವರ ಹೆಸರನ್ನು ಸರ್ಕಾರಿ ಕಟ್ಟಡ, ಉದ್ಯಾನ, ರಸ್ತೆಗಳಿಗೆ ಇಡಬಾರದು ಎಂದು ನ್ಯಾಯಾಲಯವೇ ನಿರ್ದೇಶನ ನೀಡಿದೆ. ಕಾನೂನಿನ ಈ ಅವಕಾಶವನ್ನು ಜಿಲ್ಲೆಯಲ್ಲಿ ಗೆದ್ದು ಬಂದಿರುವ ಬಿಜೆಪಿ ಶಾಸಕರು ಬಳಸಿಕೊಳ್ಳಬೇಕು. ಸರ್ಕಾರಿ ಕಟ್ಟಡಗಳ ಮೇಲೆ ಬದುಕಿರುವವರ ಹೆಸರಿನ ಬೋರ್ಡ್ ಹಾಕಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು’ ಎಂದು ಭಾವೋದ್ವೇಗದಿಂದ ಆಗ್ರಹಿಸಿದರು.