‘ಆಪರೇಷನ್ ಕ್ಲೀನ್’ ಎಂಬ ವಿಶೇಷ ಕಾರ್ಯಕ್ರಮದಡಿ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಗರದ ವ್ಯಾಪ್ತಿಯಲ್ಲಿ ಬರುವ 129 ಶಾಲೆಗಳಲ್ಲಿ ಇದನ್ನು ಜಾರಿಗೊಳಿಸಲಾಗಿದೆ. ನಿತ್ಯ ಬೆಳಗ್ಗೆ 6.30ಕ್ಕೆ ಬಸ್ಗಳನ್ನು ಪರಿಶೀಲಿಸಲಾಗುತ್ತಿದೆ. ಅಭಿಯಾನ ಮಾದರಿಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆಎಂದುಗೌತಮ ಬುದ್ಧ ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಕೃಷ್ಣ ಹೇಳಿದ್ದಾರೆ.