ರಾಷ್ಟ್ರೀಯ ಭದ್ರತಾ ಪಡೆಯ (ಎನ್ಎಸ್ಜಿ) 35ನೇ ಸಂಸ್ಥಾಪನಾ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಮೋದಿ ನೇತೃತ್ವದ ಸರ್ಕಾರವು ಭಯೋತ್ಪಾದನೆಯ ವಿರುದ್ಧ ‘ಶೂನ್ಯ ತಾಳಿಕೆ’ ನೀತಿಯನ್ನು ಅನುಸರಿಸಿದೆ. ವಿಶೇಷಾಧಿಕಾರವನ್ನು ರದ್ದುಪಡಿಸಿದ್ದರಿಂದ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನ ಹಲವು ದಶಕಗಳಿಂದ ನಡೆಸುತ್ತಿರುವ ಪರೋಕ್ಷ ಯುದ್ಧ ಹಾಗೂ ಭಯೋತ್ಪಾದನಾ ಕೃತ್ಯಗಳನ್ನು ಕೊನೆಗಾಣಿಸಲು ಸಾಧ್ಯ. ಈ ರಾಜ್ಯದಲ್ಲಿ ದೀರ್ಘಕಾಲದವರೆಗೂ ಶಾಂತಿ ನೆಲೆಸಲಿದೆ’ ಎಂದರು.