ಮುದ್ದಾಪುರದ ಗ್ರಾಮೀಣ ಬ್ಯಾಂಕ್ ಮತ್ತು ಹೆಬ್ಬಾಳದ ವ್ಯವಸಾಯ ಸಹಕಾರಿ ಸಂಘದಲ್ಲಿ ₹ 9 ಲಕ್ಷ ಸಾಲ ಮಾಡಿದ್ದು, ಸಾಲ ತೀರಿಸಲಾಗದೇ ಜೀವನದಲ್ಲಿ ಜಿಗುಪ್ಸೆಗೊಂಡು ತಮ್ಮ ಹೊಲದಲ್ಲಿರುವ ಗಿಡಕ್ಕೆ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಸುವರ್ಣಾ ಲೋಕಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.