ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಘಟನೆಗಳು ತೀರ್ಪಿನ ವಿರುದ್ಧ ದೇಶದಾದ್ಯಂತ ಭಾರಿ ಪ್ರತಿಭಟನೆ ನಡೆಸಿದ್ದವು. ಇದರಿಂದ ಒತ್ತಡಕ್ಕೆ ಒಳಗಾದ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ತೀರ್ಪನ್ನು ತಟಸ್ಥಗೊಳಿಸುವ ರೀತಿಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದಿತ್ತು. ಹಾಗಾಗಿ, ಕೇಂದ್ರ ಸಲ್ಲಿಸಿದ ಮರುಪರಿಶೀಲನಾ ಅರ್ಜಿಯೇ ಅರ್ಥಹೀನ ಎಂದು ತಜ್ಞರು ಹೇಳುತ್ತಿದ್ದಾರೆ.