<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ ಶಾಸಕ, ಬಿಜ್ವಾಸನ್ ಕ್ಷೇತ್ರದ ದೇವಿಂದರ್ ಸಿಂಗ್ ಸೆಹ್ರಾವತ್ ಸೋಮವಾರ ಬಿಜೆಪಿಗೆ ಸೇರಿದ್ದಾರೆ. ಕಳೆದ ಶುಕ್ರವಾರ ಎಎಪಿಯ ಗಾಂಧಿನಗರ ಕ್ಷೇತ್ರದ ಶಾಸಕ ಅನಿಲ್ ಭಾಜಪೇಯಿ ಬಿಜೆಪಿ ಸೇರಿದ್ದರು.</p>.<p>‘ನರೇಂದ್ರ ಮೋದಿ ಸರ್ಕಾರ ‘ರಫೇಲ್ ಹಗರಣದ ಗಳಿಕೆ’ಯನ್ನು ಶಾಸಕರ ಖರೀದಿಗೆ ಬಳಸುತ್ತಿದೆ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ ಮೂರು ದಿನಗಳ ಅಂತರದಲ್ಲಿಯೇ ಈ ಬೆಳವಣಿಗೆ ನಡೆದಿದೆ.</p>.<p>ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ವಿಜಯ್ ಗೋಯಲ್ ಉಪಸ್ಥಿತಿಯಲ್ಲಿ ಸೆಹ್ರಾವತ್ ಬಿಜೆಪಿಗೆ ಸೇರ್ಪಡೆಯಾದರು.</p>.<p>ಬಿಜೆಪಿಯು ತನ್ನ ಏಳು ಶಾಸಕರಿಗೆ ತಲಾ ₹ 10 ಕೋಟಿ ಆಮಿಷವೊಡ್ಡಿದೆ ಎಂದು ಎಎಪಿ ಆರೋಪಿಸಿತ್ತು. ಆದರೆ, ಇದನ್ನು ಬಿಜೆಪಿ ನಿರಾಕರಿಸಿತ್ತು.</p>.<p>ನನ್ನನ್ನು ಪಕ್ಷದ ಕಾರ್ಯಗಳಿಗೆ ಆಮಂತ್ರಿಸುತ್ತಿರಲಿಲ್ಲ. ಪಕ್ಷ ನನ್ನನ್ನು ಅವಮಾನಿಸಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಸೆಹ್ರಾವತ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಮ್ ಆದ್ಮಿ ಪಕ್ಷದ ಶಾಸಕ, ಬಿಜ್ವಾಸನ್ ಕ್ಷೇತ್ರದ ದೇವಿಂದರ್ ಸಿಂಗ್ ಸೆಹ್ರಾವತ್ ಸೋಮವಾರ ಬಿಜೆಪಿಗೆ ಸೇರಿದ್ದಾರೆ. ಕಳೆದ ಶುಕ್ರವಾರ ಎಎಪಿಯ ಗಾಂಧಿನಗರ ಕ್ಷೇತ್ರದ ಶಾಸಕ ಅನಿಲ್ ಭಾಜಪೇಯಿ ಬಿಜೆಪಿ ಸೇರಿದ್ದರು.</p>.<p>‘ನರೇಂದ್ರ ಮೋದಿ ಸರ್ಕಾರ ‘ರಫೇಲ್ ಹಗರಣದ ಗಳಿಕೆ’ಯನ್ನು ಶಾಸಕರ ಖರೀದಿಗೆ ಬಳಸುತ್ತಿದೆ’ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆರೋಪಿಸಿದ ಮೂರು ದಿನಗಳ ಅಂತರದಲ್ಲಿಯೇ ಈ ಬೆಳವಣಿಗೆ ನಡೆದಿದೆ.</p>.<p>ದೆಹಲಿ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ವಿಜಯ್ ಗೋಯಲ್ ಉಪಸ್ಥಿತಿಯಲ್ಲಿ ಸೆಹ್ರಾವತ್ ಬಿಜೆಪಿಗೆ ಸೇರ್ಪಡೆಯಾದರು.</p>.<p>ಬಿಜೆಪಿಯು ತನ್ನ ಏಳು ಶಾಸಕರಿಗೆ ತಲಾ ₹ 10 ಕೋಟಿ ಆಮಿಷವೊಡ್ಡಿದೆ ಎಂದು ಎಎಪಿ ಆರೋಪಿಸಿತ್ತು. ಆದರೆ, ಇದನ್ನು ಬಿಜೆಪಿ ನಿರಾಕರಿಸಿತ್ತು.</p>.<p>ನನ್ನನ್ನು ಪಕ್ಷದ ಕಾರ್ಯಗಳಿಗೆ ಆಮಂತ್ರಿಸುತ್ತಿರಲಿಲ್ಲ. ಪಕ್ಷ ನನ್ನನ್ನು ಅವಮಾನಿಸಿದೆ. ಕ್ಷೇತ್ರದ ಅಭಿವೃದ್ಧಿ ದೃಷ್ಟಿಯಿಂದ ಈ ತೀರ್ಮಾನ ಕೈಗೊಂಡಿದ್ದೇನೆ ಎಂದು ಸೆಹ್ರಾವತ್ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>