<p><strong>ನವದೆಹಲಿ:</strong> ‘ನನಗೆ ಕಪಾಳ ಮೋಕ್ಷ ಮಾಡಿರುವುದು ಇಡೀ ದೆಹಲಿ ಜನರಿಗೆ ಅವಮಾನ ಮಾಡಿದಂತೆ. ನಿನ್ನೆಯ ಘಟನೆ ಬಿಜೆಪಿ ಮಾರ್ಗದರ್ಶನದಲ್ಲೇನಡೆದಿದೆ,’ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಳಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧ್ವನಿ ಎತ್ತುವವರ ದಾಳಿ ನಡೆಸಲಾಗುತ್ತಿದೆ. ಇದು ಮೋದಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಕೇಜ್ರಿವಾಲ್ ರಾಜಕರಣಕ್ಕೆ ಬಂದ ಮೇಲಿಂದ 9 ಬಾರಿ ದಾಳಿ ನಡೆಸಲಾಗಿದೆ. ಮುಖ್ಯಮಂತ್ರಿಯಾದಗಿನಿಂದ 5 ಭಾರಿ ದಾಳಿ ಮಾಡಲಾಗಿದೆ. ಈ ದೇಶದ ಯಾವ ರಾಜ್ಯದ ಮುಖ್ಯಮಂತ್ರಿಗಳ ಮೇಲೆಯೂ ದಾಳಿ ನಡೆದ ಉದಾರಹಣೆಗಳಿಲ್ಲ ಎಂದು ಎಎಪಿ ಮುಖಂಡರೊಬ್ಬರು ತಿಳಿಸಿದರು.</p>.<p>ದೆಹಲಿ ಮುಖ್ಯಮಂತ್ರಿಯ ಭದ್ರತೆ ಜವಾಬ್ದಾರಿ ವಿರೋಧ ಪಕ್ಷಗಳ ಕೈಯಲ್ಲಿ ಇರುವುದು ದುರಂತ ಎಂದು ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದರು.</p>.<p>ಶನಿವಾರ ಕೇಜ್ರಿವಾಲ್ ರೋಡ್ ಶೋ ನಡೆಸುವ ವೇಳೆ ಸುರೇಶ್ ಚೌಹಾಣ್ ಎಂಬುವರು ಕಪಾಳ ಮೋಕ್ಷ ಮಾಡಿದ್ದರು. ಸುರೇಶ್ ಚೌಹಾಣ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ನನಗೆ ಕಪಾಳ ಮೋಕ್ಷ ಮಾಡಿರುವುದು ಇಡೀ ದೆಹಲಿ ಜನರಿಗೆ ಅವಮಾನ ಮಾಡಿದಂತೆ. ನಿನ್ನೆಯ ಘಟನೆ ಬಿಜೆಪಿ ಮಾರ್ಗದರ್ಶನದಲ್ಲೇನಡೆದಿದೆ,’ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ತಿಳಿಸಿದ್ದಾರೆ.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅರವಿಂದ್ ಕೇಜ್ರಿವಾಲ್, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಧ್ವನಿ ಎತ್ತುವವರ ದಾಳಿ ನಡೆಸಲಾಗುತ್ತಿದೆ. ಇದು ಮೋದಿ ಅವರ ಮಾರ್ಗದರ್ಶನದಲ್ಲಿ ನಡೆಯುತ್ತಿದೆ ಎಂದು ಆರೋಪಿಸಿದರು.</p>.<p>ಕೇಜ್ರಿವಾಲ್ ರಾಜಕರಣಕ್ಕೆ ಬಂದ ಮೇಲಿಂದ 9 ಬಾರಿ ದಾಳಿ ನಡೆಸಲಾಗಿದೆ. ಮುಖ್ಯಮಂತ್ರಿಯಾದಗಿನಿಂದ 5 ಭಾರಿ ದಾಳಿ ಮಾಡಲಾಗಿದೆ. ಈ ದೇಶದ ಯಾವ ರಾಜ್ಯದ ಮುಖ್ಯಮಂತ್ರಿಗಳ ಮೇಲೆಯೂ ದಾಳಿ ನಡೆದ ಉದಾರಹಣೆಗಳಿಲ್ಲ ಎಂದು ಎಎಪಿ ಮುಖಂಡರೊಬ್ಬರು ತಿಳಿಸಿದರು.</p>.<p>ದೆಹಲಿ ಮುಖ್ಯಮಂತ್ರಿಯ ಭದ್ರತೆ ಜವಾಬ್ದಾರಿ ವಿರೋಧ ಪಕ್ಷಗಳ ಕೈಯಲ್ಲಿ ಇರುವುದು ದುರಂತ ಎಂದು ಕೇಜ್ರಿವಾಲ್ ವಿಷಾದ ವ್ಯಕ್ತಪಡಿಸಿದರು.</p>.<p>ಶನಿವಾರ ಕೇಜ್ರಿವಾಲ್ ರೋಡ್ ಶೋ ನಡೆಸುವ ವೇಳೆ ಸುರೇಶ್ ಚೌಹಾಣ್ ಎಂಬುವರು ಕಪಾಳ ಮೋಕ್ಷ ಮಾಡಿದ್ದರು. ಸುರೇಶ್ ಚೌಹಾಣ್ ವಿರುದ್ಧ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>