<p><strong>ನವದೆಹಲಿ: </strong>ಆಗ್ನೇಯ ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.<p>ಮಾರ್ಚ್ 1ರಂದು ಶಾಹೀನ್ ಬಾಗ್ ರಸ್ತೆಯನ್ನು ತೆರವುಗೊಳಿಸುವುದಾಗಿ ಹಿಂದೂ ಸೇನಾ ಸಂಘಟನೆಯು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶನಿವಾರ ಪೊಲೀಸರು ಮಧ್ಯಪ್ರವೇಶಿಸಿದ ನಂತರ ಶಾಹೀನ್ ಬಾಗ್ನಲ್ಲಿ ಸಿಎಎ ವಿರೋಧಿ ಆಂದೋಲನದ ವಿರುದ್ಧ ಹಿಂದೂ ಸೇನಾ ತನ್ನ ಉದ್ದೇಶಿತ ಪ್ರತಿಭಟನೆಯನ್ನು ರದ್ದುಗೊಳಿಸಿದೆ.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ ಶಾಹಿನ್ ಬಾಗ್ನಲ್ಲಿ ಭಾರೀ ಪ್ರಮಾಣದ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವುದು ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವುದು ನಮ್ಮ ಉದ್ದೇಶ‘ ಎಂದು ಜಂಟಿ ಆಯುಕ್ತ ಡಿ. ಸಿ. ಶ್ರೀವಾಸ್ತವ ತಿಳಿಸಿದ್ದಾರೆ.</p>.<p>ಕಳೆದ ವಾರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳನ್ನು ತಡೆಯಲು ವಿಫಲವಾದ ಕಾರಣ ದೆಹಲಿ ಪೊಲೀಸರು ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆ ಕಾರಣ ಭಾನುವಾರ ಶಾಹಿನ್ ಬಾಗ್ನಲ್ಲಿ ಯಾವುದೇವ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.</p>.<p>ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಇಲ್ಲಿಯವರೆಗೆ 42 ಜನರು ಬಲಿಯಾಗಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.</p>.<p>ಸಾವಿರಾರು ಮಹಿಳೆಯರು ಎರಡು ತಿಂಗಳಿಗೂ ಹೆಚ್ಚು ಕಾಲ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ಶಾಹಿನ್ ಬಾಗ್ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಆಗ್ನೇಯ ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.</p>.<p>ಮಾರ್ಚ್ 1ರಂದು ಶಾಹೀನ್ ಬಾಗ್ ರಸ್ತೆಯನ್ನು ತೆರವುಗೊಳಿಸುವುದಾಗಿ ಹಿಂದೂ ಸೇನಾ ಸಂಘಟನೆಯು ಕರೆ ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶನಿವಾರ ಪೊಲೀಸರು ಮಧ್ಯಪ್ರವೇಶಿಸಿದ ನಂತರ ಶಾಹೀನ್ ಬಾಗ್ನಲ್ಲಿ ಸಿಎಎ ವಿರೋಧಿ ಆಂದೋಲನದ ವಿರುದ್ಧ ಹಿಂದೂ ಸೇನಾ ತನ್ನ ಉದ್ದೇಶಿತ ಪ್ರತಿಭಟನೆಯನ್ನು ರದ್ದುಗೊಳಿಸಿದೆ.</p>.<p>‘ಮುನ್ನೆಚ್ಚರಿಕೆ ಕ್ರಮವಾಗಿ ಶಾಹಿನ್ ಬಾಗ್ನಲ್ಲಿ ಭಾರೀ ಪ್ರಮಾಣದ ಪೊಲೀಸ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವುದು ಮತ್ತು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯುವುದು ನಮ್ಮ ಉದ್ದೇಶ‘ ಎಂದು ಜಂಟಿ ಆಯುಕ್ತ ಡಿ. ಸಿ. ಶ್ರೀವಾಸ್ತವ ತಿಳಿಸಿದ್ದಾರೆ.</p>.<p>ಕಳೆದ ವಾರ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಗಳನ್ನು ತಡೆಯಲು ವಿಫಲವಾದ ಕಾರಣ ದೆಹಲಿ ಪೊಲೀಸರು ವ್ಯಾಪಕ ಟೀಕೆಗೆ ಒಳಗಾಗಿದ್ದಾರೆ. ಆ ಕಾರಣ ಭಾನುವಾರ ಶಾಹಿನ್ ಬಾಗ್ನಲ್ಲಿ ಯಾವುದೇವ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.</p>.<p>ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯಲ್ಲಿ ಇಲ್ಲಿಯವರೆಗೆ 42 ಜನರು ಬಲಿಯಾಗಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.</p>.<p>ಸಾವಿರಾರು ಮಹಿಳೆಯರು ಎರಡು ತಿಂಗಳಿಗೂ ಹೆಚ್ಚು ಕಾಲ ಪೌರತ್ವ ತಿದ್ದುಪಡಿ ಕಾನೂನಿನ ವಿರುದ್ಧ ಶಾಹಿನ್ ಬಾಗ್ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>