‘ಗಣ್ಯರು ಪ್ರಧಾನಿಗೆ ಬರೆದ ಪತ್ರದಿಂದ ದೇಶದ ಘನತೆಗೆ ಧಕ್ಕೆಯಾಗಿದೆ. ಇವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡಿ’ ಎಂದುಮುಜಪ್ಫರಪುರದ ವಕೀಲರೊಬ್ಬರು ಅಲ್ಲಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮೊರೆ ಹೋಗಿದ್ದರು. ಪತ್ರ ಬರೆದವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿತ್ತು. ಈ ಕ್ರಮದ ವಿರುದ್ಧ ದೇಶದಾದ್ಯಂತ ಭಾರಿ ಆಕ್ರೋಶ ವ್ಯಕ್ತವಾಗಿತ್ತು.