‘ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಅಡಚಣೆಗಳು ಉಂಟಾಗಬಾರದು, ಸುಗಮವಾಗಿ ನಡೆಯಬೇಕು ಎಂಬ ಉದ್ದೇಶದಿಂದ ರುದ್ರಾಭಿಷೇಕ ಮತ್ತು ವಿಶೇಷ ಪೂಜೆ ಮಾಡಲಾಗಿದೆ. ಗರ್ಭಗುಡಿಯ ಶಿಲಾನ್ಯಾಸ ನೆರವೇರಿಸಲು ಪ್ರಧಾನಿ ನರೇಂದ್ರ ಮೊದಿ ಅವರನ್ನು ಆಹ್ವಾನಿಸಲಾಗಿತ್ತು. ಆದರೆ ಕೋವಿಡ್–19 ವ್ಯಾಪಕವಾಗುತ್ತಿರುವುದರಿಂದ ಅವರಿಗೆ ಅಯೋಧ್ಯೆಗೆ ಬರಲು ಆಗಲಿಲ್ಲ. ನಂತರ ಈ ಕಾರ್ಯಕ್ರಮ ರದ್ದುಗೊಳಿಸಲಾಯಿತು. ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲು ಬರುವಂತೆ ಪ್ರಧಾನಿಯನ್ನು ಭೇಟಿ ಮಾಡಿ ಮತ್ತೊಮ್ಮೆ ಆಹ್ವಾನ ನೀಡಲಾಗುವುದು’ ಎಂದು ಮಹಾಂತ ಕಮಲ್ ನಯನ್ ದಾಸ್ ಹೇಳಿದರು.