2014ರ ನವೆಂಬರ್ 18ರಂದು ಹಿಸ್ಸಾರ್ನ ಬರ್ವಾಲ ಪಟ್ಟಣದ ಸತ್ಲೋಕ್ ಆಶ್ರಮದಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದಲ್ಲಿ ರಾಮ್ಪಾಲ್ ಬಂಧಿಸಲು ಪೊಲೀಸರು 2014ರ ನವೆಂಬರ್ 19ರಂದು ಆಶ್ರಮಕ್ಕೆ ತೆರಳಿದ್ದರು. ಆಗ ಆಶ್ರಮದಲ್ಲಿ ಉಂಟಾದ ಗಲಭೆಯಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಮಗು ಸಾವಿಗೀಡಾಗಿತ್ತು. ಈ ಎರಡೂ ಪ್ರಕರಣಗಳ ಸಂಬಂಧ ರಾಮ್ಪಾಲ್ ವಿರುದ್ಧ ಕೊಲೆ, ಕೊಲೆಗೆ ಯತ್ನ, ಪಿತೂರಿ, ಶಸ್ತ್ರಾಸ್ತ್ರ ಅಕ್ರಮ ಸಂಗ್ರಹ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದ್ದವು.