ಮಂಗಳವಾರ 'ಸಾಮ್ನಾ'ದಲ್ಲಿ ಮೋದಿ ವಿರುದ್ಧ ಗುಡುಗಿದ ಶಿವಸೇನಾ, ಕೊರೊನಾ ಸೋಂಕು ಬಗ್ಗೆ ಜನರು ಗಂಭೀರವಾಗಿ ಯೋಚಿಸಬೇಕು ಎಂದು ಹೇಳಿದೆ.
ಸೋಂಕಿನ ಬಗ್ಗೆ ಜನರಲ್ಲಿ ಭೀತಿ ಶುರುವಾಗುತ್ತಿರುವ ಹೊತ್ತಿನಲ್ಲಿಯೇ ಮೋದಿಯವರು ಆರೋಗ್ಯ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಬಾಲ್ಕನಿಯಲ್ಲಿ ನಿಂತು ಚಪ್ಪಾಳೆ ಹೊಡಯಿರಿ, ತಟ್ಟೆಗೆ ಬಡಿದು ಸದ್ದು ಮಾಡಿ ಎಂದು ಹೇಳಿದ್ದರು. ಮೋದಿಯವರ ಆಹ್ವಾನಕ್ಕೆ ಪ್ರತಿಕ್ರಿಯಿಸಿದ ಜನರು ಗುಂಪು ಗುಂಪಾಗಿ ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಕುಣಿದರು. ಅದೊಂದು ಹಬ್ಬದ ವಾತಾವರಣವನ್ನು ಸೃಷ್ಚಿಸಿತ್ತು.