ಪವಾರ್ ಭೇಟಿಯನ್ನು ಲೇವಡಿ ಮಾಡಿದ್ದ ಬಿಜೆಪಿಯ ಮಹಾರಾಷ್ಟ್ರ ಘಟಕದ ಮುಖ್ಯಸ್ಥ ಚಂದ್ರಕಾಂತ ಪಾಟೀಲ್, ‘ಪವಾರ್ ಅವರು ಈಗ ಎಚ್ಚರಗೊಂಡಿದ್ದಾರೆ’ ಎಂದಿದ್ದರು. ಇದಕ್ಕೆ ಸೇನಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದೆ. ‘ಪವಾರ್ ಅವರು ಯಾವಾಗಲೂ ಎಚ್ಚರದಿಂದ ಇರುತ್ತಾರೆ. ಆರು ತಿಂಗಳ ಹಿಂದೆ ಬಿಜೆಪಿಯವರು ಮಧ್ಯರಾತ್ರಿ ಎದ್ದು ಕುಳಿತು ಬೆಳಿಗ್ಗೆ ಹೊತ್ತಿಗೆ ಸರ್ಕಾರ ರಚಿಸಿದ್ದರು. ಆದರೆ ಎರಡೇ ದಿನದಲ್ಲಿ ಪವಾರ್ ಅವರನ್ನು ಕಟ್ಟಿಹಾಕಿದರು’ ಎಂದು ಸೇನಾ ಹೇಳಿದೆ.