ಗುರುವಾರ ಬೆಳಿಗ್ಗೆ ಮಹಾರಾಷ್ಟ್ರ ಕಾಂಗ್ರೆಸ್ನ ಅಧ್ಯಕ್ಷ ಬಾಳಾಸಾಹೇಬ್ ತೋರಟ್, ಕಾಂಗ್ರೆಸ್ನ ಮಾಜಿ ಮುಖ್ಯಮಂತ್ರಿಗಳಾದ ಅಶೋಕ್ ಚವಾಣ್ ಮತ್ತು ಪೃಥ್ವಿರಾಜ್ ಚವಾಣ್ ಅವರು ಶರದ್ ಪವಾರ್ ಅವರನ್ನು, ಅವರ ಮನೆಯಲ್ಲಿ ಭೇಟಿ ಮಾಡಿದ್ದರು.ಸರ್ಕಾರ ರಚನೆಗೆ ಹಕ್ಕು ಮಂಡನೆಯಲ್ಲಿ ವಿಳಂಬ ಆಗುತ್ತಿರುವ ಸಂಬಂಧ ಕಾಂಗ್ರೆಸ್ ಮತ್ತು ಎನ್ಸಿಪಿಯ ನಡೆ ಏನಾಗಿರಬೇಕು ಎಂಬುದನ್ನು ಈ ಭೇಟಿ ವೇಳೆ ಚರ್ಚಿಸಲಾಗಿದೆ.