ಮುಂಬೈ: ವಯೋಸಹಜ ಕಾಯಿಲೆಯಿಂದಾಗಿ ಬಿಜೆಪಿ ಹಿರಿಯ ನಾಯಕಿ ಹಾಗೂ ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ತಾಯಿ ಚಂದ್ರಕಾಂತ ಗೋಯಲ್ ಅವರು ಶುಕ್ರವಾರ ರಾತ್ರಿ ಮುಂಬೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಸಚಿವ ಗೋಯಲ್ ಟ್ವೀಟ್ ಮಾಡಿದ್ದು, 'ನನ್ನ ತಾಯಿಯು ತನ್ನ ಸಂಪೂರ್ಣ ಜೀವನವನ್ನು ಜನರ ಸೇವೆಗಾಗಿ ಮುಡಿಪಾಗಿಟ್ಟಿದ್ದರು. ಅಲ್ಲದೇ ಅವರ ಕಾರ್ಯವೈಖರಿಯಿಂದ ಬೇರೆಯವರಿಗೂ ಜನರ ಸೇವೆ ಮಾಡುವಂತೆ ಪ್ರೇರೇಪಿಸಿದ್ದರು' ಎಂದು ತಿಳಿಸಿದ್ದಾರೆ.
अपने स्नेह, और प्रेम से मुझे हमेशा राह दिखाने वाली मेरी पूज्य माता जी का आज सुबह स्वर्गवास हो गया।
उन्होंने अपना पूरा जीवन सेवा करते हुए बिताया, और हमें भी सेवाभाव से जीवन बिताने को प्रेरित किया। ईश्वर उन्हें अपने श्री चरणों मे स्थान दें। ॐ शांतिः pic.twitter.com/mwlIks6TBJ
ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿಕೆಯಾದ ಸಂದರ್ಭದಲ್ಲಿ ಚಂದ್ರಕಾಂತ ಗೋಯಲ್ ಅವರು ಮೊದಲ ಬಾರಿಗೆ ಮುಂಬೈ ಪಾಲಿಕೆಯ ಕಾರ್ಪೋರೇಟರ್ ಆಗಿ ಆಯ್ಕೆಯಾಗಿದ್ದರು. ಬಳಿಕ ಬಿಜೆಪಿ ಸೇರಿದ್ದ ಅವರು, ಮುಂಬೈನ ಮಾತುಂಗ ವಿಧಾನಸಭೆಯಿಂದ ಮೂರು ಬಾರಿ ಶಾಸಕಿಯಾಗಿ ಆಯ್ಕೆಯಾಗಿದ್ದರು.