ಮಕ್ಕಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿರುವ 80 ವರ್ಷಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರು ದೂರು ನೀಡಿದರೆ, ಆದ್ಯತೆಯ ಮೇರೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ಎಲ್ಲಾ ವೃದ್ಧಾಶ್ರಮಗಳು, ಪಾಲನಾ ಕೇಂದ್ರಗಳು ಸಂಬಂಧಪಟ್ಟ ಪ್ರಾಧಿಕಾರದಿಂದ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ವೃದ್ಧರ ಸಮಸ್ಯೆಗಳನ್ನು ಆಲಿಸಲು ಎಲ್ಲಾ ಪೊಲೀಸ್ ಠಾಣೆಗಳಲ್ಲಿ ನೋಡಲ್ ಅಧಿಕಾರಿಯನ್ನು ನೇಮಿಸುವ ಪ್ರಸ್ತಾವವೂ ಈ ಕರಡು ಮಸೂದೆಯಲ್ಲಿ ಇದೆ.