ಜಮ್ಮು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮತ್ತು ರಾಜ್ಯದ ಮರು ವಿಂಗಡಣೆ ಪ್ರಕ್ರಿಯೆ ಬಳಿಕ ಸಂಘಟನೆ ನಿಷ್ಕ್ರಿಯವಾಗಿದೆಎಂದು ಉಲ್ಲೇಖಿಸಿದ ಗಿಲಾನಿ, ‘ಮುಂದೆ ಯಾವ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ನಾನು ಹಲವು ಸಂದೇಶಗಳನ್ನು ಕಳುಹಿಸಿದ್ದರೂ, ನನ್ನ ಪ್ರಯತ್ನಗಳೆಲ್ಲಾ ವ್ಯರ್ಥವಾದವು. ನೀವು ಎಲ್ಲಾ ಮಿತಿಗಳನ್ನು ಮೀರಿರುವಿರಿ ಮತ್ತು ನಾಯಕತ್ವದ ವಿರುದ್ಧ ದಂಗೆ ಎದ್ದಿದ್ದೀರಿ’ ಎಂದೂ ಪತ್ರದಲ್ಲಿ ಆರೋಪಿಸಿದ್ದಾರೆ.