ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ರುಖ್ ಕಾಕರಿ, ರಾವಲ್ಕೋಟ್ ಗಡಿಯ ಏಳು ಮುಂಚೂಣಿ ಸೇನಾನೆಲೆಗಳನ್ನು ನಾಶ ಮಾಡಲಾಗಿದೆ. ಈ ವೇಳೆಪಾಕಿಸ್ತಾನದ ಹಲವು ಯೋಧರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಭಾರತೀಯ ಪಡೆಗಳು ನಡೆಸಿದ ಪ್ರತಿದಾಳಿಯಲ್ಲಿ ಪಾಕ್ ಪಡೆಯ 3 ಯೋಧರು ಮೃತಪಟ್ಟಿದ್ದಾರೆ’ ಎಂದು ಪಾಕಿಸ್ತಾನದ ಅಂತರ–ಸೇವಾ ಸಾರ್ವಜನಿಕ ಸಂಪರ್ಕ (ಐಎಸ್ಪಿಆರ್) ತಿಳಿಸಿದೆ.