ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೈಂಗಿಕ ದೌರ್ಜನ್ಯ: ದೂರು ನೀಡಿದವರ ರಕ್ಷಣೆಗೆ ಸೂಚನೆ

Last Updated 5 ನವೆಂಬರ್ 2018, 19:55 IST
ಅಕ್ಷರ ಗಾತ್ರ

ನವದೆಹಲಿ: ಯಾವುದೇ ಸಂಸ್ಥೆಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ದೂರುಗಳ ಪರಿಹಾರಕ್ಕೆ ವ್ಯವಸ್ಥೆ ಇಲ್ಲದಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಮಾಹಿತಿ ಆಯೋಗವು (ಸಿಐಸಿ) ರಾಷ್ಟ್ರೀಯ ಮಹಿಳಾ ಆಯೋಗಕ್ಕೆ(ಎನ್‌ಸಿಡಬ್ಲ್ಯು) ಸೂಚನೆ ನೀಡಿದೆ. ದೇಶದಾದ್ಯಂತ ಲೈಂಗಿಕ ಕಿರುಕುಳ ಪ್ರಕರಣಗಳ ವಿರುದ್ಧ ‘ಮೀ– ಟೂ’ ಅಭಿಯಾನ ತೀವ್ರ ಸ್ವರೂಪ ಪಡೆಯುತ್ತಿರುವ ಕಾರಣ ಸಿಐಸಿ ಈ ಸೂಚನೆ ನೀಡಿದೆ.

ಮಹಿಳೆಯೊಬ್ಬರು ಎನ್‌ಸಿಡಬ್ಲ್ಯುಗೆ ದೂರು ನೀಡಿದರೆ, ಸಂಬಂಧಿಸಿದ ಸಂಸ್ಥೆಗಳ ಮುಖ್ಯಸ್ಥರು ಅಥವಾ ಆಂತರಿಕ ದೂರು ಸಮಿತಿ ದೂರು ನೀಡಿದವರನ್ನು ‘ಅನ್ಯಾಯದ ವಿರುದ್ಧ ಹೋರಾಡಿದವರ ರೀತಿ’ ಪರಿಗಣಿಸಬೇಕು ಮತ್ತು ರಕ್ಷಣೆ ನೀಡಬೇಕು ಎಂದು ಸಿಐಸಿ ಆಯುಕ್ತ ಶ್ರೀಧರ ಆಚಾರ್ಯುಲು ಹೇಳಿದ್ದಾರೆ.

ದಾಮೋದರ್‌ ವ್ಯಾಲಿ ಕಾರ್ಪೊರೇಷನ್‌ನಲ್ಲಿ ನಡೆದಿದೆ ಎನ್ನಲಾಗಿರುವ ಲೈಂಗಿಕ ದೌರ್ಜನ್ಯದ ದೂರಿನ ತನಿಖೆಯ ಮಾಹಿತಿಯನ್ನು ಮಾಹಿತಿ ಹಕ್ಕು ಕಾರ್ಯಕರ್ತರೊಬ್ಬರು ಕೇಳಿದ್ದರು. ಆದರೆ ಮಾಹಿತಿ ನೀಡಿರಲಿಲ್ಲ. ಈ ಬಗ್ಗೆ ದಾಖಲಾದ ದೂರಿನ ವಿಚಾರಣೆ ನಡೆಸಿದ ಸಿಐಸಿ, ಮಹಿಳಾ ಆಯೋಗಕ್ಕೆ ಮೇಲಿನಂತೆ ಸಲಹೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT