ಸಿಜೆಐ ವಿರುದ್ಧ ಆರೋಪ ಮಾಡಿರುವ ಮಹಿಳೆ, ‘ಸಮಿತಿಯಿಂದ ನ್ಯಾಯ ಸಿಗುವುದಿಲ್ಲ ಎನ್ನುವ ಭಾವನೆ ಬಂದಿದೆ. ಜತೆಗೆ ವಕೀಲರನ್ನು ಕರೆದೊಯ್ಯಲು ಅನುಮತಿ ನೀಡುತ್ತಿಲ್ಲ. ಇದರಿಂದಾಗಿಇನ್ನು ಮುಂದೆ ತನಿಖಾ ಸಮಿತಿ ಎದುರು ಹಾಜರಾಗುವುದಿಲ್ಲ’ ಎಂದು ಮಂಗಳವಾರ ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ್ದ ಪ್ರಕಟಣೆಯಲ್ಲಿ ತಿಳಿಸಿದ್ದರು.