‘ಎಪ್ಪತ್ತು ವರ್ಷಗಳಲ್ಲಿ ಯಾವ ಸರ್ಕಾರವೂ ಮುಟ್ಟದ ಸಮಸ್ಯೆಗಳನ್ನು, ಆರು ವರ್ಷಗಳಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪರಿಹರಿಸಿದೆ. 370ನೇ ವಿಧಿ, ತ್ರಿವಳಿ ತಲಾಖ್ ಸಮಸ್ಯೆಗಳನ್ನು ಪರಿಹರಿಸಿದೆ. ಇದೇ ರೀತಿ, ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ಸುಶೀಲ್ ಮೋದಿ ಅವರೂ ಬಡವರಿಗಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಆದರೆ ಅವರು ಈ ಬಗ್ಗೆ ಪ್ರಚಾರ ಮಾಡಿಲ್ಲ’ ಎಂದು ಶಾ ಹೊಗಳಿದರು.