‘ಒಂದೂವರೆ ತಿಂಗಳಿಗೂ ಹೆಚ್ಚು ಸಮಯದಿಂದ ದೆಹಲಿಯ ಶಾಹೀನ್ ಬಾಗ್, ಕಾಳಿಂದಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇದರಿಂದಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ.ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಸಮಗ್ರ ಮಾರ್ಗಸೂಚಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು’ ಎಂದು ಗರ್ಗ್ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.