ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಲಿಗೆ ಆರೋಪ: ಕಾನೂನು ವಿದ್ಯಾರ್ಥಿನಿಗೆ ಜಾಮೀನು ಮಂಜೂರು

Last Updated 4 ಡಿಸೆಂಬರ್ 2019, 15:54 IST
ಅಕ್ಷರ ಗಾತ್ರ

ಅಲಹಾಬಾದ್‌: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಅಲಹಾಬಾದ್‌ ಹೈಕೋರ್ಟ್‌ ಬುಧವಾರ ಜಾಮೀನು ಮಂಜೂರು ಮಾಡಿದೆ.

ಸ್ವಾಮಿ ಚಿನ್ಮಯಾನಂದ ಒಡೆತನ ಟ್ರಸ್ಟ್‌ ನಡೆಸುತ್ತಿರುವ ಶಾಹಜಹಾನ್‌ಪುರ ಕಾನೂನು ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ, ‘ನನ್ನ ಮೇಲೆ ಚಿನ್ಮಯಾನಂದ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿದ್ದಾರೆ.

ಆದರೆ, ‘ಆರೋಪಿತ ವಿದ್ಯಾರ್ಥಿನಿ ಹಾಗೂ ಆಕೆಯ ಮೂವರು ಸ್ನೇಹಿತರು ₹ 5 ಕೋಟಿ ನೀಡುವಂತೆ ನನ್ನ ಬಳಿ ಬೇಡಿಕೆ ಇಟ್ಟಿದ್ದರು’ ಎಂಬುದಾಗಿ ಚಿನ್ಮಯಾನಂದ ನೀಡಿದ್ದ ದೂರಿನನ್ವಯ ಈಕೆಯನ್ನು ಪೊಲೀಸರು ಬಂಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT