ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜೇ ದಪ್ಪಗಿದ್ದಾರೆ ಎಂದಿದ್ದಕ್ಕೆ ಶರದ್‌ಯಾದವ್‌ ವಿಷಾದ

Last Updated 8 ಡಿಸೆಂಬರ್ 2018, 18:47 IST
ಅಕ್ಷರ ಗಾತ್ರ

ರಾಂಚಿ: ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ದಪ್ಪಗಾಗಿದ್ದಾರೆ ಎಂದು ಹೇಳಿದ್ದ ಜೆಡಿಯು ಮಾಜಿ ಮುಖಂಡ ಶರದ್‌ಯಾದವ್‌ ಅವರು ವಿಷಾದ ವ್ಯಕ್ತಪಡಿಸಿದ್ದಾರೆ.

’ನನಗೆ ಅವಮಾನ ಮಾಡಿರುವ ಶರದ್‌ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದು ರಾಜೇ ಅವರು ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದರು. ಇದರ ಬೆನ್ನಲ್ಲೇ ರಾಜೇ ಅವರಿಗೆ ಪತ್ರ ಬರೆದಿರುವ ಶರದ್‌, ನನ್ನಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ’ ಎಂದು ಹೇಳಿದ್ದಾರೆ.

ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದಂತೆ ಸ್ಪಷ್ಟನೆ ನೀಡಿರುವ ಶರದ್‌, ರಾಜೇ ಅವರನ್ನು ಅವಮಾನಿಸಬೇಕು ಎಂಬ ಉದ್ದೇಶದಿಂದ ಆ ರೀತಿ ಹೇಳಿಲ್ಲ. ಹಾಸ್ಯವಾಗಿ ಹೇಳಿದ್ದೆ ಅಷ್ಟೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT