<p><strong>ನವದೆಹಲಿ: </strong>ನಾಯಕತ್ವಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವುದನ್ನು ಕಾಂಗ್ರೆಸ್ ಪ್ರಮುಖ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಪಕ್ಷದ ಹಿರಿಯ ನಾಯಕ, ಸಂಸದ <a href="https://www.prajavani.net/tags/shashi-tharoor" target="_blank">ಶಶಿ ತರೂರ್ </a>ಒತ್ತಾಯಿಸಿದ್ದಾರೆ. ಪಕ್ಷದ ಪುನಶ್ಚೇತನಕ್ಕಾಗಿ ಅಧ್ಯಕ್ಷ ಸ್ಥಾನದ ಮೇಲಿನ ಅನಿಶ್ಚಿತತೆಯನ್ನು ಹೋಗಲಾಡಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ಕಾಂಗ್ರೆಸ್ ಮುಖ್ಯಸ್ಥರಾಗಿ ರಾಹುಲ್ ಗಾಂಧಿಯವರು ಮುಂದುವರಿಯಲು ಬಯಸಿದಲ್ಲಿ ಅದು ಅವರಿಗೆ ಬಿಟ್ಟ ವಿಚಾರ. ಆದರೆ, ಅವರು ಹಿಂದಿನ ನಿಲುವನ್ನು ಬದಲಾಯಿಸುವುದಿಲ್ಲ ಎಂದಾದರೆ ಪಕ್ಷವು ಪೂರ್ಣಾವಧಿಯ ನಾಯಕತ್ವವನ್ನು ಕಂಡುಕೊಳ್ಳಬೇಕು. ಇದರಿಂದ ದೇಶದ ನಿರೀಕ್ಷೆಗೆ ತಕ್ಕಂತೆ ಮುಂದುವರಿಯಲು ಸಾಧ್ಯ’ ಎಂದು <em>ಪಿಟಿಐ </em>ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತರೂರ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/is-rahul-gandhi-new-aicc-new-president-706841.html" target="_blank">ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ?</a></p>.<p>ಬಿಜೆಪಿಯ ‘ವಿಭಜಕ ನೀತಿ’ಗಳಿಗೆ ಕಾಂಗ್ರೆಸ್ ಪಕ್ಷವೇ ರಾಷ್ಟ್ರೀಯ ಪರ್ಯಾಯ ಎಂದು ಪ್ರತಿಪಾದಿಸಿರುವ ಅವರು, ರಾಜಕೀಯ ಅಸ್ತಿತ್ವಕ್ಕಾಗಿ ನಾವು ಅಲೆಯುತ್ತಿರುವವರು ಎಂಬ ಭಾವನೆ ಸಾರ್ವಜನಕರಲ್ಲಿ ಉಂಟಾಗುತ್ತಿದೆ. ಇದುವೇ ನಮ್ಮಲ್ಲಿ ಅನೇಕರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.</p>.<p>ಈ ಭಾವನೆಯು ಸ್ವಾಭಾವಿಕವಾಗಿ ಕೆಲವು ಮತದಾರರು ಇತರ ಆಯ್ಕೆಗಳನ್ನು ಪರಿಗಣಿಸುವಂತೆ ಮಾಡುತ್ತದೆ. ಇದಕ್ಕೆ ಇತ್ತೀಚಿನ ಉದಾಹರಣೆ ದೆಹಲಿ ವಿಧಾನಸಭೆ ಚುನಾವಣೆ. ಅಲ್ಲಿ ಮತದಾರರು ಎಎಪಿಯನ್ನು ಮತ್ತು ಸ್ವಲ್ಪ ಮಟ್ಟಿಗೆ ಬಿಜೆಪಿಯನ್ನು ಆಯ್ಕೆ ಮಾಡಿದರು. ಕಾಂಗ್ರೆಸ್ಗೆ ಸ್ಥಾನವೇ ದೊರೆಯಲಿಲ್ಲ ಎಂದು ತರೂರ್ ಹೇಳಿದ್ದಾರೆ.</p>.<p>ಹೀಗಾಗಿ ಸಾರ್ವಜನಿಕರ ಗ್ರಹಿಕೆಯನ್ನು ಬದಲಾಯಿಸುವ ಸಲುವಾಗಿ ತುರ್ತು ಕ್ರಮ ಕೈಗೊಳ್ಳಬೇಕಿದೆ. ಜತೆಗೆ, ಪಕ್ಷವನ್ನು ಪದೇಪದೇ ಕಡೆಗಣಿಸಿ ಬರೆಯುತ್ತಿರುವ ಮಾಧ್ಯಮಗಳ ದೃಷ್ಟಿಕೋನವನ್ನೂ ಬದಲಾಯಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.</p>.<p>ಕಾರ್ಯಕರ್ತರಲ್ಲಿ ಶಕ್ತಿ ತುಂಬಲು ಹಾಗೂ ಮತದಾರರಿಗೆ ಸ್ಫೂರ್ತಿ ನೀಡಲು ಪಕ್ಷದ ನಾಯಕತ್ವ ಸ್ಥಾನಕ್ಕೆ ಚುನಾವಣೆ ನಡೆಸಬೇಕು ಎಂದು ಶಶಿ ತರೂರ್ ಎರಡು ದಿನ ಹಿಂದೆಯಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ನಾಯಕತ್ವಕ್ಕೆ ಸಂಬಂಧಿಸಿದ ಸಮಸ್ಯೆ ಬಗೆಹರಿಸುವುದನ್ನು ಕಾಂಗ್ರೆಸ್ ಪ್ರಮುಖ ಆದ್ಯತೆಯಾಗಿ ಪರಿಗಣಿಸಬೇಕು ಎಂದು ಪಕ್ಷದ ಹಿರಿಯ ನಾಯಕ, ಸಂಸದ <a href="https://www.prajavani.net/tags/shashi-tharoor" target="_blank">ಶಶಿ ತರೂರ್ </a>ಒತ್ತಾಯಿಸಿದ್ದಾರೆ. ಪಕ್ಷದ ಪುನಶ್ಚೇತನಕ್ಕಾಗಿ ಅಧ್ಯಕ್ಷ ಸ್ಥಾನದ ಮೇಲಿನ ಅನಿಶ್ಚಿತತೆಯನ್ನು ಹೋಗಲಾಡಿಸಬೇಕು ಎಂದು ಅವರು ಪ್ರತಿಪಾದಿಸಿದ್ದಾರೆ.</p>.<p>‘ಕಾಂಗ್ರೆಸ್ ಮುಖ್ಯಸ್ಥರಾಗಿ ರಾಹುಲ್ ಗಾಂಧಿಯವರು ಮುಂದುವರಿಯಲು ಬಯಸಿದಲ್ಲಿ ಅದು ಅವರಿಗೆ ಬಿಟ್ಟ ವಿಚಾರ. ಆದರೆ, ಅವರು ಹಿಂದಿನ ನಿಲುವನ್ನು ಬದಲಾಯಿಸುವುದಿಲ್ಲ ಎಂದಾದರೆ ಪಕ್ಷವು ಪೂರ್ಣಾವಧಿಯ ನಾಯಕತ್ವವನ್ನು ಕಂಡುಕೊಳ್ಳಬೇಕು. ಇದರಿಂದ ದೇಶದ ನಿರೀಕ್ಷೆಗೆ ತಕ್ಕಂತೆ ಮುಂದುವರಿಯಲು ಸಾಧ್ಯ’ ಎಂದು <em>ಪಿಟಿಐ </em>ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ತರೂರ್ ಹೇಳಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/national/is-rahul-gandhi-new-aicc-new-president-706841.html" target="_blank">ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ?</a></p>.<p>ಬಿಜೆಪಿಯ ‘ವಿಭಜಕ ನೀತಿ’ಗಳಿಗೆ ಕಾಂಗ್ರೆಸ್ ಪಕ್ಷವೇ ರಾಷ್ಟ್ರೀಯ ಪರ್ಯಾಯ ಎಂದು ಪ್ರತಿಪಾದಿಸಿರುವ ಅವರು, ರಾಜಕೀಯ ಅಸ್ತಿತ್ವಕ್ಕಾಗಿ ನಾವು ಅಲೆಯುತ್ತಿರುವವರು ಎಂಬ ಭಾವನೆ ಸಾರ್ವಜನಕರಲ್ಲಿ ಉಂಟಾಗುತ್ತಿದೆ. ಇದುವೇ ನಮ್ಮಲ್ಲಿ ಅನೇಕರ ಆತಂಕಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.</p>.<p>ಈ ಭಾವನೆಯು ಸ್ವಾಭಾವಿಕವಾಗಿ ಕೆಲವು ಮತದಾರರು ಇತರ ಆಯ್ಕೆಗಳನ್ನು ಪರಿಗಣಿಸುವಂತೆ ಮಾಡುತ್ತದೆ. ಇದಕ್ಕೆ ಇತ್ತೀಚಿನ ಉದಾಹರಣೆ ದೆಹಲಿ ವಿಧಾನಸಭೆ ಚುನಾವಣೆ. ಅಲ್ಲಿ ಮತದಾರರು ಎಎಪಿಯನ್ನು ಮತ್ತು ಸ್ವಲ್ಪ ಮಟ್ಟಿಗೆ ಬಿಜೆಪಿಯನ್ನು ಆಯ್ಕೆ ಮಾಡಿದರು. ಕಾಂಗ್ರೆಸ್ಗೆ ಸ್ಥಾನವೇ ದೊರೆಯಲಿಲ್ಲ ಎಂದು ತರೂರ್ ಹೇಳಿದ್ದಾರೆ.</p>.<p>ಹೀಗಾಗಿ ಸಾರ್ವಜನಿಕರ ಗ್ರಹಿಕೆಯನ್ನು ಬದಲಾಯಿಸುವ ಸಲುವಾಗಿ ತುರ್ತು ಕ್ರಮ ಕೈಗೊಳ್ಳಬೇಕಿದೆ. ಜತೆಗೆ, ಪಕ್ಷವನ್ನು ಪದೇಪದೇ ಕಡೆಗಣಿಸಿ ಬರೆಯುತ್ತಿರುವ ಮಾಧ್ಯಮಗಳ ದೃಷ್ಟಿಕೋನವನ್ನೂ ಬದಲಾಯಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.</p>.<p>ಕಾರ್ಯಕರ್ತರಲ್ಲಿ ಶಕ್ತಿ ತುಂಬಲು ಹಾಗೂ ಮತದಾರರಿಗೆ ಸ್ಫೂರ್ತಿ ನೀಡಲು ಪಕ್ಷದ ನಾಯಕತ್ವ ಸ್ಥಾನಕ್ಕೆ ಚುನಾವಣೆ ನಡೆಸಬೇಕು ಎಂದು ಶಶಿ ತರೂರ್ ಎರಡು ದಿನ ಹಿಂದೆಯಷ್ಟೇ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಒತ್ತಾಯಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>