ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವಾನ್ ಇಂದ್ರನ ಸಿಂಹಾಸನವನ್ನು ನೀಡುತ್ತೇವೆ ಎಂದರೂ ಕೂಡ ಶಿವಸೇನಾ ಬಿಜೆಪಿಯೊಂದಿಗೆ ಹೋಗುವುದಿಲ್ಲ. ಕಾಂಗ್ರೆಸ್ ಮತ್ತು ಎನ್ಸಿಪಿ ಜೊತೆಗಿನ ಮೂರು ಪಕ್ಷಗಳ ಮೈತ್ರಿ ಅಧಿಕಾರ ವಹಿಸಿಕೊಂಡಾಗ ತಮ್ಮ ಪಕ್ಷಕ್ಕೆ ಮಹಾರಾಷ್ಟ್ರ ಸಿಎಂ ಹುದ್ದೆ ಸಿಗಲಿದೆ ಎಂದು ರಾವುತ್ ಪುನರುಚ್ಚರಿಸಿದರು.