ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿಯೊಂದಿಗೆ ಸೆಣಸಿದ್ದ ಬಿಜೆಪಿ–ಶಿವಸೇನಾ ಬಳಿಕ ಅಧಿಕಾರ ಹಂಚಿಕೆ ಬಿಕ್ಕಟ್ಟಿನಿಂದಾಗಿ ಸ್ನೇಹ ಕಡಿದುಕೊಂಡಿವೆ. ನಂತರ ಕಾಂಗ್ರೆಸ್, ಎನ್ಸಿಪಿ ಜತೆಗೂಡಿ ಸರ್ಕಾರ ರಚಿಸಲು ಶಿವಸೇನಾ ಒಲವು ತೋರ್ಪಡಿಸಿದ್ದರೂ ಯಶಸ್ವಿಯಾಗಿಲ್ಲ. ಇನ್ನೇನು ಎನ್ಸಿಪಿ ಮತ್ತು ಕಾಂಗ್ರೆಸ್ ಬೆಂಬಲ ಸಿಕ್ಕಿಯೇಬಿಡ್ತು ಎನ್ನುವಾಗ ಎನ್ಸಿಪಿ ವರಿಷ್ಠ ಶರದ್ ಪವಾರ್ ಯೂಟರ್ನ್ ಮಾಡಿದ್ದಾರೆ. ಸೋಮವಾರ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ್ದಪವಾರ್,ಬಿಜೆಪಿ–ಶಿವಸೇನಾ ಅವರ ದಾರಿ ನೋಡಿಕೊಳ್ಳಲಿ; ನಮ್ಮ ಹಾದಿ ನಮಗೆ ಎಂದು ಹೇಳಿದ್ದರು.