‘ಪಾಟೀಲ್ ಅವರು ಕೇರಳ ಮಾದರಿಯನ್ನು ಸರಿಯಾಗಿ ಅಧ್ಯಯನ ಮಾಡಿಲ್ಲ ಅನಿಸುತ್ತಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಸರ್ಕಾರದ ಮಾರ್ಗದರ್ಶಿಯನ್ನು ಪಾಲಿಸುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಜತೆಗಿನ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸುವುದೆಂದರೆ ಸಮಯ ವ್ಯರ್ಥಗೊಳಿಸಿದಂತೆ ಎಂದು ಅವರು ಭಾವಿಸಿದ್ದಾರೆ’ ಎಂದು ಸಂಪಾದಕೀಯದಲ್ಲಿ ಉಲ್ಲೇಖಿಸಲಾಗಿದೆ.