‘ದೇವೇಂದ್ರ ಫಡಣವೀಸ್ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರ ಬಳಿ ತೆರಳುವಾಗ 144 ಶಾಸಕರ ಸಹಿಗಳಿರುವ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು. ಆದರೆ, ಫಡಣವೀಸ್ ಯಾವುದೇ ಪತ್ರ ತೆಗೆದುಕೊಂಡು ಹೋಗಿರುವುದರ ಬಗ್ಗೆ ಮಾಹಿತಿ ಇಲ್ಲ. ಅಜಿತ್ ಪವಾರ್ ಅವರನ್ನು ಹೊರತುಪಡಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ನ ಎಲ್ಲ ಶಾಸಕರು ನಮ್ಮ ಮೈತ್ರಿಯನ್ನು ಒಪ್ಪಿಕೊಂಡಿದ್ದಾರೆ,’ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.