<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.</p>.<p>‘ದೇವೇಂದ್ರ ಫಡಣವೀಸ್ ಅವರು ಹೇಗೆ ಮತ್ತು ಯಾವ ರೀತಿಯಲ್ಲಿ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಂಬುದು ಸಾರ್ವಜನಿಕರಿಗೆ ತಿಳಿದಿಲ್ಲ. ಬಿಜೆಪಿಯು ತನ್ನ ಅಧಿಕಾರ ಶಕ್ತಿಯಿಂದ ರಾಜ್ಯಭವನವನ್ನು ದುರುಪಯೋಗ ಮಾಡಿಕೊಂಡಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕು,’ ಎಂದು ಉನ್ನತ ನ್ಯಾಯಾಲಯಕ್ಕೆ ಮೂರು ಪಕ್ಷಗಳು ಮನವಿ ಸಲ್ಲಿಸಲುತೀರ್ಮಾನಿಸಿವೆ.</p>.<p>‘ದೇವೇಂದ್ರ ಫಡಣವೀಸ್ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರ ಬಳಿ ತೆರಳುವಾಗ 144 ಶಾಸಕರ ಸಹಿಗಳಿರುವ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು. ಆದರೆ, ಫಡಣವೀಸ್ ಯಾವುದೇ ಪತ್ರ ತೆಗೆದುಕೊಂಡು ಹೋಗಿರುವುದರ ಬಗ್ಗೆ ಮಾಹಿತಿ ಇಲ್ಲ. ಅಜಿತ್ ಪವಾರ್ ಅವರನ್ನು ಹೊರತುಪಡಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ನ ಎಲ್ಲ ಶಾಸಕರು ನಮ್ಮ ಮೈತ್ರಿಯನ್ನು ಒಪ್ಪಿಕೊಂಡಿದ್ದಾರೆ,’ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.</p>.<p>ಇದನ್ನೂ ಓದಿ :<a href="https://www.prajavani.net/stories/national/illegitimate-govt-constituted-by-hitman-governor-black-chapter-in-indias-history-congress-684605.html" target="_blank">'ಜೈಲಿಗೆ ಅಟ್ಟಬೇಕಿದ್ದ ಬಿಜೆಪಿ ಅಜಿತ್ರನ್ನು ಡಿಸಿಎಂ ಸ್ಥಾನಕ್ಕೇರಿಸಿದೆ'</a></p>.<p>ಇದನ್ನೂ ಓದಿ:<a href="https://www.prajavani.net/stories/national/maharashtra-politics-ram-vilas-paswan-tweet-viral-684630.html" target="_blank">ಮಹಾರಾಷ್ಟ್ರ ರಾಜಕೀಯ | ಪಾಸ್ವಾನ್ ಟ್ವೀಟ್: ತಕ್ಷಣ ನಿರ್ಣಯ ತೆಗೆದುಕೊಳ್ಳದಿದ್ದರೆ..</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong> ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸುಪ್ರೀಂ ಕೋರ್ಟ್ ಮೊರೆ ಹೋಗಲು ನಿರ್ಧರಿಸಿವೆ.</p>.<p>‘ದೇವೇಂದ್ರ ಫಡಣವೀಸ್ ಅವರು ಹೇಗೆ ಮತ್ತು ಯಾವ ರೀತಿಯಲ್ಲಿ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಂಬುದು ಸಾರ್ವಜನಿಕರಿಗೆ ತಿಳಿದಿಲ್ಲ. ಬಿಜೆಪಿಯು ತನ್ನ ಅಧಿಕಾರ ಶಕ್ತಿಯಿಂದ ರಾಜ್ಯಭವನವನ್ನು ದುರುಪಯೋಗ ಮಾಡಿಕೊಂಡಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಬೇಕು,’ ಎಂದು ಉನ್ನತ ನ್ಯಾಯಾಲಯಕ್ಕೆ ಮೂರು ಪಕ್ಷಗಳು ಮನವಿ ಸಲ್ಲಿಸಲುತೀರ್ಮಾನಿಸಿವೆ.</p>.<p>‘ದೇವೇಂದ್ರ ಫಡಣವೀಸ್ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರ ಬಳಿ ತೆರಳುವಾಗ 144 ಶಾಸಕರ ಸಹಿಗಳಿರುವ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು. ಆದರೆ, ಫಡಣವೀಸ್ ಯಾವುದೇ ಪತ್ರ ತೆಗೆದುಕೊಂಡು ಹೋಗಿರುವುದರ ಬಗ್ಗೆ ಮಾಹಿತಿ ಇಲ್ಲ. ಅಜಿತ್ ಪವಾರ್ ಅವರನ್ನು ಹೊರತುಪಡಿಸಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ನ ಎಲ್ಲ ಶಾಸಕರು ನಮ್ಮ ಮೈತ್ರಿಯನ್ನು ಒಪ್ಪಿಕೊಂಡಿದ್ದಾರೆ,’ ಎಂದು ಸುಪ್ರೀಂ ಕೋರ್ಟ್ಗೆ ಸಲ್ಲಿಸಲಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.</p>.<p>ಇದನ್ನೂ ಓದಿ :<a href="https://www.prajavani.net/stories/national/illegitimate-govt-constituted-by-hitman-governor-black-chapter-in-indias-history-congress-684605.html" target="_blank">'ಜೈಲಿಗೆ ಅಟ್ಟಬೇಕಿದ್ದ ಬಿಜೆಪಿ ಅಜಿತ್ರನ್ನು ಡಿಸಿಎಂ ಸ್ಥಾನಕ್ಕೇರಿಸಿದೆ'</a></p>.<p>ಇದನ್ನೂ ಓದಿ:<a href="https://www.prajavani.net/stories/national/maharashtra-politics-ram-vilas-paswan-tweet-viral-684630.html" target="_blank">ಮಹಾರಾಷ್ಟ್ರ ರಾಜಕೀಯ | ಪಾಸ್ವಾನ್ ಟ್ವೀಟ್: ತಕ್ಷಣ ನಿರ್ಣಯ ತೆಗೆದುಕೊಳ್ಳದಿದ್ದರೆ..</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>