ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುತ್ತಿರುವ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಪಕ್ಷಗಳು ಗುರುವಾರ 'ಮಹಾ ವಿಕಾಸ ಆಘಾಡಿ'ಯಸಾಮಾನ್ಯ ಕನಿಷ್ಠ ಕಾರ್ಯಕ್ರಮಗಳ (ಸಿಎಂಪಿ) ಪಟ್ಟಿಯನ್ನು ಬಿಡುಗಡೆ ಮಾಡಿವೆ.
ಈ ಮೂರು ಪಕ್ಷಗಳು ಒಂದು ವಾರ ಮಾತುಕತೆ ನಡೆಸಿ ಈ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ರೂಪಿಸಿದ್ದು, ಜಾತ್ಯಾತೀತವಾದ ಎಲ್ಲವನ್ನೂ ಒಳಗೊಂಡ ಕಾರ್ಯಕ್ರಮಗಳನ್ನು ಇದು ಒಳಗೊಂಡಿದೆ. ಯಾವ ಯಾವ ಕ್ಷೇತ್ರಕ್ಕೆ ಏನೇನು ಯೋಜನೆಗಳು ಎಂಬ ವಿವರ ಈ ಕೆಳಗಿದೆ.
ಕೃಷಿ
* ಪ್ರವಾಹದಿಂದ ಸಂತ್ರಸ್ತರಾಗಿರುವ ರೈತರಿಗೆ ತಕ್ಷಣ ನೆರವು
* ರೈತರ ಸಾಲ ಮನ್ನ ತಕ್ಷಣ ಜಾರಿ
* ಬೆಳೆ ಕಳೆದುಕೊಂಡ ರೈತರಿಗೆ ತಕ್ಷಣವೇ ಪರಿಹಾರ ಸಿಗುವಂತಾಗಲು ಬೆಳೆ ವಿಮೆ ಯೋಜನೆ ಪರಿಷ್ಕರಣೆ
* ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ ಸಿಗಲು ಸೂಕ್ತ ಕ್ರಮ ಕೈಗೊಳ್ಳುವುದು
* ಬರಗಾಲ ಪೀಡಿತ ಪ್ರದೇಶಗಳಿಗೆ ಸೂಕ್ತ ನೀರಾವರಿ ಒದಗಿಸಲು ಕ್ರಮ
Common Minimum Program of 'Maha Vikas Aghadi' (NCP-Congress-Shiv Sena alliance): Immediate assistance & loan waiver for farmers. Crop Insurance Scheme to be revised to ensure immediate compensation to the farmers who have lost their crops. https://t.co/wahSgBmsXw
— ANI (@ANI) November 28, 2019
ನಿರುದ್ಯೋಗ
*ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ತಕ್ಷಣ ಕ್ರಮ
* ಶಿಕ್ಷಣ ಪಡೆದ ನಿರುದ್ಯೋಗಿಗಳಿಗೆ ಶಿಷ್ಯವೇತನ ನೀಡಲಾಗುವುದು
* ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಶೇ 80ರಷ್ಟು ಮೀಸಲಾತಿ ಕಲ್ಪಿಸುವ ಕಾನೂನನ್ನು ಜಾರಿಗೆ ತರಲಾಗುವುದು
ಮಹಿಳೆ
* ಮಹಿಳಾ ಸುರಕ್ಷತೆಗೆ ಹೆಚ್ಚಿನ ಆದ್ಯತೆ
* ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ
* ಜಿಲ್ಲಾ ಕೇಂದ್ರಗಳು ಹಾಗೂ ನಗರಗಳಲ್ಲಿ ಔದ್ಯೋಗಿಕ ಮಹಿಳೆಯರಿಗೆ ಹಾಸ್ಟೆಲ್ ನಿರ್ಮಾಣ
* ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಗೌರವಧನ ಏರಿಕೆ ಮತ್ತು ಇತರೆ ಸೇವಾ ಸೌಲಭ್ಯಗಳನ್ನು ನೀಡಲಾಗುವುದು
* ಮಹಿಳಾ ಸ್ವಸಹಾಯ ಗುಂಪುಗಳ ಬಲವರ್ಧನೆ
ಶಿಕ್ಷಣ
* ಶಿಕ್ಷಣದ ಗುಣಮಟ್ಟ ಉತ್ತಮ ಪಡಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು
* ಕೃಷಿ ಕಾರ್ಮಿಕರ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಶೂನ್ಯ ಬಡ್ಡಿದರದಲ್ಲಿ ಶಿಕ್ಷಣ ಸಾಲ ಒದಗಿಸಲಾಗುವುದು
ನಗರಾಭಿವೃದ್ಧಿ
* ಮುಖ್ಯಮಂತ್ರಿ ಗ್ರಾಮ ಸಡಕ್ ಯೋಜನೆಯ ರೀತಿಯಲ್ಲಿಯೇ ನಗರ ಪ್ರದೇಶದ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು. ರಸ್ತೆ ಅಭಿವೃದ್ಧಿಗಾಗಿಯೇ ನಗರ ಪಂಚಾಯಿತಿ, ಪುರಸಭೆ, ನಗರ ಪಾಲಿಕೆಗಳಲ್ಲಿ ಪ್ರತ್ಯೇಕ ಆಯವ್ಯಯ ಇಡಲಾಗುವುದು.
* ಕೊಳಗೇರಿ ಪುನರ್ವಸತಿ ಕಾರ್ಯಕ್ರಮದ ಅಡಿ ನೀಡಲಾಗುತ್ತಿದ್ದ 300 ಚದರ ಅಡಿ ಬದಲು 500 ಚದರ ಅಡಿ ಪ್ರದೇಶವನ್ನು ನೀಡಲು ನಿರ್ಧರಿಸಲಾಗಿದೆ.
ಆರೋಗ್ಯ
* ತಾಲ್ಲೂಕು ಮಟ್ಟದಲ್ಲಿ ₹1ಗೆ ಚಿಕಿತ್ಸೆ ನೀಡುವಂತಹ ಕ್ಲಿನಿಕ್ಗಳ ನಿರ್ಮಾಣ
* ಎಲ್ಲಾ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜುಗಳ ಸ್ಥಾಪನೆ
* ರಾಜ್ಯದ ಎಲ್ಲಾ ನಾಗರಿಕರಿಗೆ ಆರೋಗ್ಯ ವಿಮೆ ಒದಗಿಸಲಾಗುವುದು
ಕೈಗಾರಿಕೆ
* ಹೊಸ ಕೈಗಾರಿಕೆ ಮತ್ತು ಹೂಡಿಕೆದಾರಿಗೆ ಅನುಕೂಲವಾಗುವಂತೆ ಅನುಮತಿ ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವುದು ಮತ್ತು ಸಾಧ್ಯವಾಗುಷ್ಟು ರಿಯಾಯಿತಿ ಒದಗಿಸಲಾಗುವುದು
* ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೊಸ ಹೂಡಿಕೆದಾರರನ್ನು ಸೆಳೆಯುವುದಕ್ಕಾಗಿ ನಿಯಮಗಳ ಪರಿಷ್ಕರಣೆ ಮಾಡಲಾಗುವುದು
ಸಾಮಾಜಿಕ ನ್ಯಾಯ
* ಪರಿಶಿಷ್ಟ ಜಾತಿ, ಪಂಗಡ, ಧಾಂಗರ್ ಮತ್ತು ಇತರೆ ಹಿಂದುಳಿದ ವರ್ಗಗಳ ಬಾಕಿ ಉಳಿದ ಪ್ರಕರಣಗಳ ಇತ್ಯರ್ಥ
* ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ಸಮುದಾಯದವರ ಉನ್ನತಿಗಾಗಿ ಅನೇಕ ಯೋಜನೆಗಳನ್ನ ಜಾರಿಗೆ ತರಲಾಗುವುದು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.