ಮೇ 31ರಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿದ್ದ ಸೂದ್ ಅವರು ವಲಸೆ ಕಾರ್ಮಿಕರಿಗೆ ಅವರ ರಾಜ್ಯಗಳಿಗೆ ತೆರಳಲು ನೆರವಾಗುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿದ್ದರು. ವಲಸೆ ಕಾರ್ಮಿಕರಿಗೆ ಪ್ರಯಾಣಕ್ಕೆ ವ್ಯವಸ್ಥೆ, ಆಹಾರ ಒದಗಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದರು. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದ ರಾಜ್ಯಪಾಲರು, ತಾವೂ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದರು.