ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸಾಲಿನಲ್ಲಿ ಶಿವಸೇನಾ ಸದಸ್ಯರು: ಸಂಜಯ್ ರಾವತ್

Last Updated 16 ನವೆಂಬರ್ 2019, 15:47 IST
ಅಕ್ಷರ ಗಾತ್ರ

ಮುಂಬೈ:ಶಿವಸೇನಾ ನಾಯಕರಿಗೆ ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ನಾಯಕರ ಸಾಲಿನಲ್ಲಿ ಆಸನ ವ್ಯವಸ್ಥೆ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ ಎಂದು ಪಕ್ಷದ ವಕ್ತಾರ ಸಂಜಯ್ ರಾವತ್ ಹೇಳಿದ್ದಾರೆ.

ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವಸೇನಾ ಕಳೆದವಾರ ಎನ್‌ಡಿಎ ಮೈತ್ರಿಕೂಟ ತ್ಯಜಿಸಿತ್ತು. ಇದೇ 18ರಿಂದ (ಸೋಮವಾರ) ಸಂಸತ್‌ನ ಚಳಿಗಾಲದ ಅಧಿವೇಶನ ನಡೆಯಲಿದ್ದು, ಆ ಹಿನ್ನೆಲೆಯಲ್ಲಿ ನಡೆಯುವ ಎನ್‌ಡಿಎ ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಶಿವಸೇನಾ ಈಗಾಗಲೇ ಸ್ಪಷ್ಟಪಡಿಸಿದೆ.

ನವೆಂಬರ್ 17ಕ್ಕೆ ಎನ್‌ಡಿಎ ಸಭೆ ನಡೆಯುವ ಬಗ್ಗೆ ಮಾಹಿತಿ ದೊರೆತಿದೆ. ಆ ಸಭೆಯಲ್ಲಿ ಭಾಗವಹಿಸದಿರಲು ನಾವು ಈಗಾಗಲೇ ತೀರ್ಮಾನಿಸಿದ್ದೇವೆ. ನಮ್ಮ ಸಚಿವರು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಆಗಿದೆ ಎಂದು ರಾವತ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT