35 ಗಂಟೆಗಳ ಕಾಲ ಸತತ ವಿಚಾರಣೆ ನಡೆಸಿದ ನಂತರವೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಮೂಲಗಳು ಹೇಳಿವೆ. ತಮ್ಮ ನಿವಾಸದಲ್ಲಿ ದೊರೆತ ಹಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವೈರುಧ್ಯದ ಹೇಳಿಕೆಗಳನ್ನು ನೀಡಿರುವ ಕಾರಣ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಕುಮಾರ್ ಅವರನ್ನು ತಮ್ಮ ವಶಕ್ಕೆ ಒಪ್ಪಿಸಲು ಕೋರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಮೂಲಗಳು ಹೇಳಿವೆ.