ಮುಂಬೈ: ಬಿಜೆಪಿ ಜೊತೆ ಈ ಹಿಂದೆ ಮಾಡಿಕೊಂಡ ಒಪ್ಪಂದಕ್ಕೆ ನಾವು ಬದ್ಧರಾಗಿದ್ದು ಮುಖ್ಯಮಂತ್ರಿ ಹುದ್ದೆ ಕುರಿತಂತೆ ಬಿಜೆಪಿ ನಾಯಕರ ಜೊತೆ ಚರ್ಚೆ ಮಾಡುತ್ತೇವೆ ಎಂದು ಶಿವಸೇನೆ ಮುಖ್ಯಸ್ಥ ಉದ್ದವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿದರು. ಚುನಾವಣೆ ಪೂರ್ವದಲ್ಲಿ ಮಾಡಿಕೊಂಡಿದ್ದ ಒಪ್ಪಂದಕ್ಕೆ ನಾವು ಬದ್ದರಾಗಿದ್ದೇವೆ ಎಂದು ಹೇಳಿದ್ದಾರೆ. ಜನರ ತೀರ್ಪನ್ನು ಸ್ವಾಗತಿಸಿರುವುದಾಗಿ ಉದ್ದವ್ ಠಾಕ್ರೆ ಹೇಳಿದರು.
ಮುಖ್ಯಮಂತ್ರಿ ಸ್ಥಾನ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು 50:50 ಹೊಂದಾಣಿಕೆಯಂತೆ ಸಿಎಂ ಸ್ಥಾನದ ಕುರಿತಾಗಿಯೂ ಬಿಜೆಪಿ ಜೊತೆ ಚರ್ಚೆ ಮಾಡಲಾಗುವುದು ಎಂದು ಉದ್ದವ್ ಹೇಳಿದರು.
Shiv Sena chief Uddhav Thackeray: The 50-50 formula was decided. Discussions should be held and then it should be decided that who would be the Chief Minister (of Maharashtra). pic.twitter.com/YuSvKDZfhe